Breaking News

ಅಪಘಾತದ ಬಾಕಿ ಪರಿಹಾರ ಮೊತ್ತ ನೀಡದ ಕೆಎಸ್​ಆರ್​ಟಿಸಿ.. ದಾವಣಗೆರೆಯಲ್ಲಿ ಎರಡು ಬಸ್ ಜಪ್ತಿ

Spread the love

ದಾವಣಗೆರೆ: ಅಪಘಾತ ಪ್ರಕರಣವೊಂದರಲ್ಲಿ ಬಾಕಿ ಪರಿಹಾರ ಮೊತ್ತ ನೀಡದ ಹಿನ್ನೆಲೆ ಸೋಮವಾರ ನ್ಯಾಯಾಲಯದ ಆದೇಶದ ಮೇರೆಗೆ ಎರಡು ವಾಯುವ್ಯ ಕರ್ನಾಟಕ ಸಾರಿಗೆ ಬಸ್​ಗಳನ್ನು ಜಪ್ತಿ ಮಾಡಲಾಯಿತು.

ಇಲ್ಲಿನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಹಾವೇರಿ ಡಿಪೋಗೆ ಸೇರಿದ ಎರಡು ಬಸ್‍ಗಳನ್ನು ನ್ಯಾಯಾಂಗ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಕೆಎಸ್​ಆರ್​ಟಿಸಿ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆದೇಶಿಸಿತ್ತು.

2013ರಲ್ಲಿ ತುಮಕೂರು ಟೋಲ್ ಬಳಿ ಹಾವೇರಿ ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿಗೆ ತೆರಳುತ್ತಿದ್ದ ಸಾಫ್ಟ್‍ವೇರ್ ಇಂಜಿನಿಯರ್ ಸಂಜೀವ್ ಎಂ ಪಾಟೀಲ್ ಮೃತಪಟ್ಟಿದ್ದರು. ಇವರ ಪತ್ನಿ ಗೌರಿ ಪಾಟೀಲ್‍ಗೆ 2,82,42,885 (ಎರಡು ಕೋಟಿ 82 ಲಕ್ಷ, 42 ಸಾವಿರದ 885) ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಆದರೆ ಪರಿಹಾರ ಮೊತ್ತವನ್ನು ಪೂರ್ಣವಾಗಿ ನೀಡಲು ಸತಾಯಿಸುತ್ತಿರುವ ಕೆಎಸ್​ಆರ್​ಟಿಸಿ ಸಂಸ್ಥೆಯು ಈವರೆಗೆ 2.20 ಕೋಟಿ ರೂ. ಮಾತ್ರವೇ ಪಾವತಿಸಿದೆ. 2016ರ ನಂತರದ ಬಡ್ಡಿ ಮೊತ್ತ ಸೇರಿದಂತೆ ಇನ್ನೂ 1 ಕೋಟಿಯಷ್ಟು ಹಣವನ್ನು ಮೃತರ ವಾರಸುದಾರರಿಗೆ ಕೆಎಸ್​ಆರ್​ಟಿಸಿ ನೀಡಬೇಕಿದೆ ಎಂದು ಗೌರಿ ಎಂಬುವರ ತಂದೆ ಕಿರುವಾಡಿ ಸೋಮಶೇಖರ್ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ