Breaking News

ಕಾವೇರಿಗಾಗಿ ಭಿಕ್ಷಾ ಪಾತ್ರೆ ಹಿಡಿದು ರಕ್ಷಣಾವೇದಿಕೆಯಿಂದ ವಿಶೇಷ ಪ್ರತಿಭಟನೆ

Spread the love

ಮಂಡ್ಯ : ಮತ್ತೆ ತಮಿಳುನಾಡಿಗೆ ನೀರು ಬಿಡಲು ನಿಯಂತ್ರಣ ಸಮಿತಿ ಸೂಚನೆ ಹಿನ್ನೆಲೆಯಲ್ಲಿ ಮಂಡ್ಯದ ಸಂಜಯ ವೃತ್ತದಲ್ಲಿ ವಿಶೇಷವಾಗಿ ಭಿಕ್ಷೆ ಪಾತ್ರೆ ಹಿಡಿದು ರೈತರು ಪ್ರತಿಭಟನೆ ನಡೆಸಿದರು.

ಹರಕಲು ಅಂಗಿ, ಚಡ್ಡಿ ಧರಿಸಿ, ಕೆಲವರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿನೂತನ ಹೋರಾಟ ನಡೆದಿದ್ದು, ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದ ಜನರು ಭಿಕ್ಷೆ ಎತ್ತಬೇಕಾಗುತ್ತೆ ಎಂದು ಅಣಕಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನ ಬೀದಿಗೆ ನಿಲ್ಲಿಸಿದೆ ಎಂದು ಕಿಡಿಕಾರಿದರು.

ಕಾವೇರಿ ನಮ್ಮದು, ಕಾವೇರಿ ನಮ್ಮದು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರಸ್ತೆ ಮೇಲೆ ಉರುಳಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ