Breaking News
Home / ರಾಜಕೀಯ / ಹನಿಟ್ರ್ಯಾಪ್ ಕೇಸ್​ನ ಕಿಂಗ್ ಪಿನ್ ಆಗಿದ್ದ ಮಹಿಳೆನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ.

ಹನಿಟ್ರ್ಯಾಪ್ ಕೇಸ್​ನ ಕಿಂಗ್ ಪಿನ್ ಆಗಿದ್ದ ಮಹಿಳೆನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ.

Spread the love

ಬೆಂಗಳೂರು: ಮಧ್ಯಪ್ರದೇಶದ ಇಂದೋರ್​ನಲ್ಲಿ ಹನಿಟ್ರ್ಯಾಪ್ ಕಿಂಗ್ ಪಿನ್ ಎಂದೇ ಕುಖ್ಯಾತಿಗೊಂಡು ಕೆಲವು ತಿಂಗಳುಗಳಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಕಳ್ಳತನ ಪ್ರಕರಣದಲ್ಲಿ ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರತಿ ದಯಾಳ್ ಬಂಧಿತ ಆರೋಪಿ.‌ ಕಳ್ಳತನ ಮಾಡಿದ‌ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಜಯವಾಡದಲ್ಲಿ ಈಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ.

ಈಕೆ ಕಳೆದ ಒಂದು ತಿಂಗಳ ಹಿಂದಷ್ಟೇ ಆರತಿ ನಗರಕ್ಕೆ ಬಂದಿದ್ದಳು. ಪಿಜಿಯೊಂದರಲ್ಲಿ ವಾಸವಾಗಿದ್ದ ವೇಳೆ ರೂಮ್​ಮೇಟ್​ಳ ಚಿನ್ನದ ಆಭರಣ ಕದ್ದು ಎಸ್ಕೇಪ್‌ ಆಗಿದ್ದಳು. ಈ ಸಂಬಂಧ ಮಹದೇವಪುರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ವಿಚಾರಣೆಗೊಳಪಡಿಸಿದಾಗ ಆಕೆ ವಿರುದ್ಧ ಇಂದೋರ್ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ಗೊತ್ತಾಗಿದೆ. ಅಲ್ಲದೆ ತಲೆಮರೆಸಿಕೊಂಡಿರುವ ವಿಚಾರ ತಿಳಿದುಬಂದ ಹಿನ್ನೆಲೆಯಲ್ಲಿ‌ ಮಧ್ಯ ಪ್ರದೇಶ ಪೊಲೀಸರಿಗೂ ಮಾಹಿತಿ ನೀಡಲಾಗಿದೆ.

ಮಹಿಳೆ ಮೇಲೆ ಹಲವು ಆರೋಪ: ರಾಜಕೀಯ ನಾಯಕರು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್​ ಮೂಲಕ ವಂಚಿಸಿದ್ದ ಪ್ರಕರಣದಲ್ಲಿ ಇವಳು ಕಿಂಗ್​ಪಿನ್​ ಎಂಬ ಆರೋಪ ಕೇಳಿಬಂದಿತ್ತು. ರಾಜಕೀಯ ಮುಖಂಡರನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಳು ಎಂಬ ಆರೋಪಗಳು ಈಕೆಯ ಮೇಲಿದ್ದವು.

ಪುರಸಭೆಯ ಇಂಜಿನಿಯರ್​ವೊಬ್ಬರು ಹನಿಟ್ರ್ಯಾಪ್​ಗೆ ಸಿಲುಕಿಸಿ ತಮಗೆ 3 ಕೋಟಿಗೆ ಬೇಡಿಕೆಯಿಟ್ಟಿದ್ದಳು‌ ಎಂದು ಆರತಿ ವಿರುದ್ಧ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು 2019ರಲ್ಲಿ ಬಂಧಿಸಲಾಗಿತ್ತು.‌ ಮಧ್ಯಪ್ರದೇಶ ಹನಿಟ್ರ್ಯಾಪ್​ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನಕ್ಕೆ‌ ಕಾರಣವಾಗಿತ್ತು. 2020 ರಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರತಿ ಕೆಲ ತಿಂಗಳುಗಳಿಂದ ನಾಪತ್ತೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆರತಿ ಪತ್ತೆಗೆ ಹೈಕೋರ್ಟ್ ಸೂಚಿಸಿತ್ತು.

ಶ್ರೀಮಂತ ಹುಡುಗಿಯರ ಸ್ನೇಹ ಸಂಪಾದಿಸಿ ಕೈಚಳಕ: ಮಧ್ಯಪ್ರದೇಶದಿಂದ ಬಂದ ಬಳಿಕ ಬೆಂಗಳೂರು, ಚೆನ್ನೈನಲ್ಲಿ ಸ್ಪಾಗಳಲ್ಲಿ ಮಸಾಜ್ ಮಾಡುವ ಕೆಲಸಕ್ಕೆ‌ ಸೇರಿಕೊಂಡಿದ್ದಳು. ಸ್ಪಾಗಳಲ್ಲಿ ಕೆಲಸ ಮಾಡುವ ಶ್ರೀಮಂತ ಹುಡುಗಿಯರ ಸ್ನೇಹ ಸಂಪಾದಿಸಿ ಅವರ ವಿಶ್ವಾಸ ಗಳಿಸಿ ಅವರ ಮನೆಗಳಲ್ಲಿ ಉಳಿದು ಚಿನ್ನಾಭರಣ ಕದಿಯುತ್ತಿದ್ದಳು ಎಂಬ ಆರೋಪಿಸಿಲಾಗಿದೆ.‌ ಸೋನು, ಸಮಂತ, ಆರತಿ ಅಗರವಾಲ್ ಸೇರಿ ವಿವಿಧ ಹೆಸರುಗಳಿಂದ ಗುರುತಿಸಿಕೊಂಡಿದ್ದ ಈಕೆಯನ್ನು ಕಳ್ಳತನ ಪ್ರಕರಣದಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ