Breaking News

ರಾಜ್ಯ- ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ ಎಂದು ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದಾರೆ.

Spread the love

ದಾವಣಗೆರೆ : ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ ಎಂದು ಕೋಡಿಮಠ ಮಹಾಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯ ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದ್ರೇ ಮುಂದಿನ ಭವಿಷ್ಯ ಹೇಳುವೆ, ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರುತ್ತದೆ. ಆತಂಕ ಪಡುವ ಅಗತ್ಯವಿಲ್ಲ ಎಂದರು.

ಅನೇಕ ತಪ್ಪು ಒಪ್ಪುಗಳು ಪ್ರಾಣಿಗಳಲ್ಲಾಗುತ್ತಿವೆ ಹಾಗೂ ಮನುಷ್ಯನಲ್ಲೂ ಸಾಕಷ್ಟು ತಪ್ಪುಗಳಾಗ್ತಿವೆ. ಮನುಷ್ಯ ಎಷ್ಟೇ ತಪ್ಪುಗಳನ್ನು ಮಾಡಿದ್ರು ಕೂಡ ಆ ಭಗವಂತ ಕ್ಷಮಿಸುತ್ತಾನೆ. ಆದರೆ ಮನುಷ್ಯ ತಾನೇ ಮಾಡಿದ ಪಾಪ ಕರ್ಮಗಳು ತಿಳಿದು ತಪ್ಪು ಮಾಡಿದರೆ ಕ್ಷಮಿಸಲಾರ. ಮನುಷ್ಯ ಅಜ್ಞಾನದಲ್ಲಿ ಉಳಿದಿದ್ದಾನೆ. ಇತ್ತೀಚಿನ ದಿನಗಳಲ್ಲಿ ಗೊತ್ತಿದ್ದೂ ಮನುಷ್ಯ ಪ್ರಕೃತಿ, ನೆಲ, ಜಲವನ್ನು ನಿರಂತರವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕಾರಣ ಇಂದು ನಾವು ಅನೇಕ ರೀತಿಯ ಪ್ರಕೃತಿ ವಿಕೋಪಗಳನ್ನು ಕಾಣುತ್ತಿದ್ದೇವೆ. ಆದ್ರೂ ಈ ಬಾರಿ ಮಳೆ ಆಗಲಿದೆ. ಏನೂ ತೊಂದರೆ ಇಲ್ಲ ಎಂದರು. ಕರ್ನಾಟಕ ಸಂಪದ್ಭರಿತ ರಾಜ್ಯ ಆಗಿದ್ದರಿಂದ ಎಲ್ಲ ಒಳ್ಳೆಯದಾಗಲಿದೆ ಎಂದು ಭವಿಷ್ಯ ನುಡಿದರು.

 


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ