Breaking News

ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿ

Spread the love

ರಾಯಚೂರು: ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ.

ಸಂಗಮ ಬಾರ್​ ಹಿಂಭಾಗದ ಬಡಾವಣೆಯ ಮನೆಯೊಂದರಲ್ಲಿ ಗುರುವಾರ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಪಾರ್ವತಮ್ಮ ಲಿಂಗಯ್ಯ ಗುಂತಗೋಳ ಎಂಬುವರ ಮನೆಯಲ್ಲಿ ಕೃತ್ಯ ಎಸಗಲಾಗಿದೆ.

ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಕಳ್ಳರು ನುಗ್ಗಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಇದ್ದ ವಯೋವೃದ್ಧೆ ಕಳ್ಳರ ಕೃತ್ಯಕ್ಕೆ ಪ್ರತಿರೋಧ ತೋರಿದಾಗ ಖದೀಮರು ಬಾಯಿಯಲ್ಲಿ ಬಟ್ಟೆಯನ್ನು ಇಟ್ಟು, ಚಾಕು ತೋರಿಸಿ ಬೆದರಿಕೆ ಹಾಕಿ, ಆಕೆಯ ಕತ್ತಿನಲ್ಲಿದ್ದ ಬಂಗಾರದ ಸರ, ಕಿವಿಯಲ್ಲಿದ್ದ ಓಲೆಗಳನ್ನು ಕಿತ್ತುಕೊಂಡು ಖದೀಮರು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಇತ್ತ ಕಿವಿಯಲ್ಲಿನ ಓಲೆಗಳನ್ನು ಕಿತ್ತುಕೊಂಡು ಇಬ್ಬರು ಯುವಕರು ಪರಾರಿಯಾಗುವ ವೇಳೆ ವೃದ್ಧೆ ಚೀರಾಡಿದ್ದಾರೆ. ಆಗ ಸುತ್ತಮುತ್ತಲಿನ ನಿವಾಸಿಗಳು ಬಂದು ಘಟನೆಯಿಂದ ಗಾಬರಿಗೊಂಡಿದ್ದಾರೆ. ಜೊತೆಗೆ ಕಿವಿಯಲ್ಲಿದ್ದ ಓಲೆಗಳು ಹರಿದಿರುವುದರಿಂದ ಕಿವಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಘಟನೆ ಸಂಬಂಧಿಸಿದಂತೆ ವಿಷಯ ತಿಳಿದ ಪೊಲೀಸರು ಮನೆಗೆ ಭೇಟಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಲಿಂಗಸೂಗೂರು ಪೊಲೀಸರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, ಘಟನೆಯ ಕುರಿತಂತೆ ಮಾಹಿತಿ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ