Home / ರಾಜಕೀಯ / ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ಕ್ಕೆ ಸೂಚನೆ

ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ಕ್ಕೆ ಸೂಚನೆ

Spread the love

ಬೆಂಗಳೂರು: ಎಲ್ಲ ಜಿಲ್ಲೆಗಳಲ್ಲಿ ಸೆ.25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಠಾಚಾರಕ್ಕೆ, ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ, ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಸೂಚಿಸಿದ್ದಾರೆ.

ಜಿಲ್ಲೆಯಲ್ಲೂ ಪ್ರತಿ ತಿಂಗಳು ‘ಜನತಾ ದರ್ಶನ’: ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ. ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ