Breaking News

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

Spread the love

ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಗೂಂಡಾ ಕಾಯ್ದೆಯಡಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಜೈಲಿಂದ ಬಿಡುಗಡೆಯಾಗಿದ್ದಾರೆ.

ಗೂಂಡಾ ಕಾಯ್ದೆ ರದ್ದಾದ ಹಿನ್ನೆಲೆಯಲ್ಲಿ ಇಂದು ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಕಳೆದ ಆಗಸ್ಟ್ 11ರಂದು ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಗೂಂಡಾ ಕಾಯ್ದೆಗೆ ಸಂಬಂಧಿಸಿಂತೆ ರಚಿಸಲಾಗಿದ್ದ ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿ‌ಡಲು ಸಾಕಷ್ಟು ಕಾರಣಗಳಿಲ್ಲ ಎಂದು‌ ವರದಿ ನೀಡಿತ್ತು. ಹೀಗಾಗಿ ಪುನೀತ್ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನ ರದ್ದು ಪಡಿಸಲಾಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ