Breaking News

ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ತಾನು ಭಾಗಿಯಾಗಿಲ್ಲ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ

Spread the love

ಮಂಗಳೂರು: ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಇದೀಗ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾ‌ನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಅವರು ಜುಲೈ ತಿಂಗಳಲ್ಲಿ ಫೋನ್ ಮಾಡಿ ಈ ಪ್ರಕರಣದಲ್ಲಿ ನಿಮ್ಮ ಹೆಸರು ಇದೆ. ಗೋವಿಂದ ಬಾಬು ಪೂಜಾರಿ ಅವರು ನಿಮಗೆ ಒಂದೂವರೆ ಕೋಟಿ ನೀಡಿದ್ದಾರೆ ಎಂದು ಕೇಳಿಬರುತ್ತಿದೆ. ನೀವು ಆ ಹಣವನ್ನು ವಾಪಸ್ ನೀಡಿ ಎಂದು ಹೇಳಿದ್ದರು”. ಆಗ ನಾನು ಉತ್ತರಿಸಿ, “ಈ ಪ್ರಕರಣದಲ್ಲಿ ನಾನಿಲ್ಲ ಎಂದು ಆಕ್ರೋಶವಾಗಿ ಹೇಳಿದ್ದು ಆ ಬಳಿಕ ಫೋನ್ ಕಟ್ ಮಾಡಿದ್ದರು. ಆನಂತರ ಈ ವಿಚಾರದಲ್ಲಿ ನಾನು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ ಮತ್ತು ಬಜರಂಗದಳದ ಮುಖಂಡರಿಗೆ ಫೋನ್ ಮಾಡಿ ಈ ಬಗ್ಗೆ ವಿಚಾರಿಸಿದ್ದೇವೆ. ಆಗ ಅವರು ಈ ಬಗ್ಗೆ ನಿಮಗೆ ಗೊತ್ತಿಲ್ಲದಿದ್ದರೆ ಕೋಪ ಮಾಡಿಕೊಳ್ಳುವುದು ಬೇಡ ಎಂದು ಸಮಾಧಾನಪಡಿಸಿದ್ದರು. ಇದಾದ ಬಳಿಕ ಮತ್ತೆ ಸತ್ಯಜಿತ್ ಸುರತ್ಕಲ್ ಫೋನ್ ಮಾಡಿ ನಾನು ತಪ್ಪಿ ನಿಮ್ಮ ಹೆಸರು ಹೇಳಿದ್ದೇನೆ. ಅದು ಅಭಿನವ ಸ್ವಾಮೀಜಿ ಎಂದು ಗೊತ್ತಾಗಿದೆ ಎಂದು ಮಾತನಾಡಿದರು”.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ