Breaking News
Home / Uncategorized / ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಬೆಳಗಾವಿ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ(ಸೆ.22)ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಸೆ.20) ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀರಾವರಿ ಹಿತಾಸಕ್ತಿ ಹಾಗೂ ಕುಡಿಯುವ ನೀರು ಒದಗಿಸುವುದು ಈ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಸಲಹಾ ಸಮಿತಿಯ ನಿರ್ಧಾರ ಆಧರಿಸಿ ಅಧಿಕಾರಿಗಳು ಆದೇಶ ಮಾಡಲಿದ್ದಾರೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರದಿಂದ ಹದಿನೈದು ದಿನಗಳವರೆಗೆ ನೀರು ಹರಿಸಲಾಗುವುದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂದು ತಿಳಿಸಿದರು.

ಶಾಸಕ ಎನ್.ಎಚ್.ಕೋನರೆಡ್ಡಿ, ಮಳೆ ಕೊರತೆಯಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಆದ್ದರಿಂದ ಜನರಿಗೆ ತೊಂದರೆಯಾಗದಂತೆ ನೀರು ಬಿಡಬೇಕಿದೆ. ನೀರಾವರಿಗೆ ಅಗತ್ಯವಿರುವ ನೀರು ಮೀಸಲಿಟ್ಟುಕೊಂಡು ಅಗತ್ಯತೆ ಆಧರಿಸಿ ಕುಡಿಯುವ ನೀರು ಬಿಡುಗಡೆಗೊಳಿಸಬೇಕು” ಎಂದು ಸಲಹೆ ನೀಡಿದರು.

ಬರಗಾಲ ಎಂದು ಘೋಷಿಸಿರುವುದರಿಂದ ಪರಿಸ್ಥಿತಿ ಆಧರಿಸಿ ಕುಡಿಯುವ ಉದ್ಧೇಶಕ್ಕಾಗಿಯೇ ಹಂತ ಹಂತವಾಗಿ ಬಿಡುಗಡೆಗೊಳಿಸಬಹುದು ಎಂದು ಶಾಸಕ ಕೋನರೆಡ್ಡಿ ಅಭಿಪ್ರಾಯಪಟ್ಟರು.

ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ತೀವ್ರವಾಗಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.


Spread the love

About Laxminews 24x7

Check Also

ಸಿಲಿಂಡರ್ ಸ್ಫೊಟಗೊಂಡ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಹೆಬ್ಬಾಳ್ಕರ್

Spread the loveಬೆಳಗಾವಿ :‌ ಬೆಳಗಾವಿಯ ಸುಳಗಾ (ಯು) ಗ್ರಾಮದಲ್ಲಿ ಸಿಲಿಂಡರ್ ಸ್ಫೊಟಗೊಂಡು ದಂಪತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ