Breaking News

ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ನಿಷೇಧ ಆಗುತ್ತಾ……?

Spread the love

ಬೆಂಗಳೂರು: ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ನಿಷೇಧ ಆಗುತ್ತಾ ಎಂಬ ಪ್ರಶ್ನೆಯೊಂದು ಮೂಡಿದ್ದು, ಇಂದು ಆರೋಗ್ಯ ಇಲಾಖೆಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ.

ಕೋವಿಡ್ ಸಲಹಾ ಸಮಿತಿಯಿಂದ ಪಟಾಕಿ ನಿಷೇಧಕ್ಕೆ ಸಲಹೆ ನೀಡುವ ನಿರೀಕ್ಷೆ ಇದೆ. ಈ ಶಿಫಾರಸು ಆಧರಿಸಿ ರಾಜ್ಯದಲ್ಲಿ ಪಟಾಕಿ ನಿಷೇಧವಾಗುವ ಸಾಧ್ಯತೆಗಳಿವೆ. ಪಟಾಕಿ ನಿಷೇಧದ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸುಳಿವು ನೀಡಿದ್ದಾರೆ. ಪಟಾಕಿ ಸಿಡಿಸುವುದರಿಂದ ಕೋವಿಡ್ ಸೋಂಕಿತರ ಮೇಲೆ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ಸಚಿವರ ಜೊತೆಗಿನ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಟಾಕಿ ಹೊಡೆದು ಹೃದಯ ಸಮಸ್ಯೆ ತಂದುಕೊಳ್ಳಬೇಡಿ. ಕೋವಿಡ್ ಸೋಂಕು ನೇರವಾಗಿ ಶ್ವಾಸಕೋಶದ ಮೇಲೆ ದಾಳಿ ಮಾಡುತ್ತೆ. ಪಟಾಕಿ ಹೊಡೆದರೆ ವಾಯುಮಾಲಿನ್ಯ ಅಧಿಕಗೊಂಡು ಉಸಿರಾಟ ಸಮಸ್ಯೆ ಉಂಟಾಗುತ್ತದೆ. ಸೋಂಕಿತರ ಪ್ರಾಣಕ್ಕೆ ಪಟಾಕಿ ವಾಯುಮಾಲಿನ್ಯವೇ ಕಂಟಕ ಆಗಬಹುದು. ದೀಪ ಬೆಳಗಿ ದೀಪಾವಳಿ ಅಚರಿಸಿ, ಪಟಾಕಿ ಮಾತ್ರ ಹೊಡೀಬೇಡಿ ಎಂದು ಜನರಿಗೆ ತಜ್ಞರು ಸಲಹೆ ನೀಡಿದ್ದಾರೆ.

ದೀಪಾವಳಿ ಸರಳ ಆಚರಣೆಯ ಬಗ್ಗೆ ನಾವು ಚಿಂತನೆ ಮಾಡಬೇಕು. ಜನರ ಜೀವ ಮುಖ್ಯ. ಪಟಾಕಿಯಿಂದ ಕೆಮಿಕಲ್ಸ್ ನಿಂದ ಕೊರೊನಾ ಸೋಂಕಿತರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ವಾಯು ಮಾಲಿನ್ಯದಿಂದ ಹೈರಿಸ್ಕ್ ಕೇಸ್ ಗಳಿಗೆ ಡೇಂಜರ್ ಆಗುತ್ತೆ. ಹೈರಿಸ್ಕ್ ಕೇಸ್ ಗಳ ಬಗ್ಗೆ ನಿಗಾ ಇಡಬೇಕು. ದೀಪಾವಳಿ ಆಚರಣೆಯಿಂದ ಗುಂಪು ಗೂಡುತ್ತಾರೆ ಅದು ಡೇಂಜರ್ ಎಂದು ಅಭಿಪ್ರಾಯಿಸಿದ್ದಾರೆ.


Spread the love

About Laxminews 24x7

Check Also

ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ

Spread the love ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ  -ಖಾನಾಪೂರದ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ