Breaking News

ಚಲಿಸುತ್ತಿದ್ದ ಟ್ಯಾಕ್ಸಿಯಲ್ಲಿ 14 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಇಬ್ಬರು ದುರುಳರು ಅರೆಸ್ಟ್​

Spread the love

ಮುಂಬೈ (ಮಹಾರಾಷ್ಟ್ರ) : ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತರಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದರ ನಡುವೆ, ಮುಂಬೈನಲ್ಲಿ ಚಲಿಸುವ ಟ್ಯಾಕ್ಸಿಯಲ್ಲಿಯೇ 14 ವರ್ಷದ ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ.

ಕೇಸ್​ಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಸೆಪ್ಟೆಂಬರ್​ 18 ರಂದು ಪ್ರಕರಣ ನಡೆದಿದೆ. ಆರೋಪಿಗಳಾದ ಸಲ್ಮಾನ್ ಶೇಖ್ (26) ಮತ್ತು ಟ್ಯಾಕ್ಸಿ ಚಾಲಕ ಪ್ರಕಾಶ್ ಪಾಂಡೆ ಎಂಬ ಇಬ್ಬರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಲಾಗಿದೆ.

ಘಟನೆಯ ವಿವರ: ಸೆಪ್ಟೆಂಬರ್ 18 ರಂದು 14 ವರ್ಷದ ವಿಶೇಷ ಚೇತನ ಬಾಲಕಿ ತನ್ನ ಕುಟುಂಬಸ್ಥರೊಂದಿಗೆ ಜಗಳವಾಡಿ, ಕೋಪದಲ್ಲಿ ಆಕೆ ಮಾಲ್ವಾನಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ತೆರಳಲು ನಿರ್ಧರಿಸಿದಳು. ಇದಕ್ಕಾಗಿ ಟ್ಯಾಕ್ಸಿ ಬುಕ್​ ಮಾಡಿಕೊಂಡು ತೆರಳಿದ್ದಾಳೆ. ದಾರಿಯ ಮಧ್ಯೆ ಟ್ಯಾಕ್ಸಿ ಚಾಲಕ ಪ್ರಕಾಶ್​ ಪಾಂಡೆ, ದಾದರ್‌ನಲ್ಲಿ ಅವನ ಪರಿಚಯಸ್ಥ ಸಲ್ಮಾನ್ ಶೇಖ್‌ನನ್ನು ಟ್ಯಾಕ್ಸಿಯಲ್ಲಿ ಹತ್ತಿಸಿಕೊಂಡು ಹೋಗಿದ್ದಾನೆ.

ದಾದರ್ ಮತ್ತು ಸಾಂತಾಕ್ರೂಜ್ ನಡುವೆ ಟ್ಯಾಕ್ಸಿ ಚಲಿಸುತ್ತಿದ್ದಾಗಲೇ ಸಲ್ಮಾನ್ ಶೇಖ್ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ದುರುಳ ಬಾಲಕಿಯ ಮೇಲೆ ಕ್ರೌರ್ಯ ಮೆರೆಯುತ್ತಿದ್ದುದನ್ನು ತಡೆಯದೇ ಚಾಲಕ ಪ್ರಕಾಶ್ ಪಾಂಡೆ ಸಹಾಯ ಮಾಡಿದ್ದಾನೆ ಎಂಬ ಆರೋಪವಿದೆ. ಅತ್ಯಾಚಾರವೆಸಗಿದ ಬಳಿಕ ಬಾಲಕಿಯನ್ನು ಮಾಲ್​ವಾನಿಯಲ್ಲಿ ಆಕೆಯ ಸಂಬಂಧಿಕರ ಬಳಿ ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ.

ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಬಾಲಕಿ ಸಂಬಂಧಿಕರ ಬಳಿಕ ಹೇಳಿಕೊಂಡಿದ್ದಾಳೆ. ಬಳಿಕ ಕುಟುಂಬಸ್ಥರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು 2 ಗಂಟೆಯೊಳಗೆ ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ.

ಯುವತಿ ಮೇಲೆ ರೇಪ್​: ಉತ್ತರ ಪ್ರದೇಶದಲ್ಲಿ ಈಚಗೆ ಯುವತಿಗೆ ಬಲವಂತವಾಗಿ ಗೋಮಾಂಸ ತಿನ್ನಿಸಿದ್ದಲ್ಲದೇ ಆಕೆಯ ಮೇಲೆ ಇಬ್ಬರು ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆ ಪ್ರೇಮ್ ನಗರದ ಪೊಲೀಸ್ ವೃತ್ತದ ಸಮೀಪದಲ್ಲಿ ವಾಸಿಸುತ್ತಿದ್ದಳು. ತನ್ನ ಸ್ನೇಹಿತನಿಗೆ 30 ಸಾವಿರ ರೂಪಾಯಿ ಸಾಲ ನೀಡಿದ್ದಳು. ಸೆಪ್ಟೆಂಬರ್​ 1 ರಂದು ಹಣ ಹಿಂದಿರುಗಿಸುತ್ತೇನೆ ಎಂದು ಹೇಳಿ ಯುವತಿಯನ್ನು ಸ್ನೇಹಿತ ಹೋಟೆಲ್​ಗೆ ಕರೆಸಿಕೊಂಡಿದ್ದಾನೆ. ಹೋಟೆಲ್​ಗೆ ಬಂದಾಗ ರೂಮ್‌ನಲ್ಲಿ ಆಕೆಯ ಸ್ನೇಹಿತ ಶಿಫ್ತತ್ ಹಾಗು ಇನ್ನಿಬ್ಬರು ಗೆಳೆಯರಾದ ನದೀಮ್ ಮತ್ತು ಶೋಯೆಬ್ ಇದ್ದರು. ಇವರು ಮೂವರು ಸೇರಿ ಆಕೆಗೆ ಒತ್ತಾಯವಾಗಿ ಗೋಮಾಂಸ ತಿನ್ನಿಸಿದ್ದಾರೆ.

ಬಳಿಕ ಮತ್ತು ಬರುವ ಔಷಧ ಬೆರೆಸಿದ ಪಾನೀಯ ಕುಡಿಸಿದ್ದಾರೆ. ಯುವತಿ ಪ್ರಜ್ಞಾಹೀನಳಾದ ಬಳಿಕ ನದೀಮ್ ಮತ್ತು ಶೋಯೆಬ್ ಅತ್ಯಾಚಾರವೆಸಗಿದ್ದಾರೆ. ಸ್ನೇಹಿತ ಶಿಫ್ತತ್ ಕೃತ್ಯದ ವಿಡಿಯೋ ಮಾಡಿದ್ದ. ಬಳಿಕ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿ, ಮೂವರನ್ನೂ ಬಂಧಿಸಲಾಗಿತ್ತು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ