Breaking News

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ಕಮೀಟಿ ಸದಸ್ಯನಿಗೆ ಧಾರವಾಡದಲ್ಲಿ ಸನ್ಮಾನ

Spread the love

ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿ ಹಾಗೂ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಸಮಿತಿ ಸದಸ್ಯರಿಗೆ ಧಾರವಾಡದಲ್ಲಿ ಮಾಜಿ ಮೇಯರ್ ಹಾಗೂ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಸನ್ಮಾನಿಸಿ ಗೌರವಿಸಿದರು.

ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಮಾನಯ್ಯ ಬಡಿಗೇರ ಅವರು ಇಂದು ಧಾರವಾಡಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನ ಮಾಜಿ ಮಹಾಪೌರರಾದ ಈರೇಶ ಅಂಚಟಗೇರಿ ರವರು ಭೇಟಿ ನೀಡಿ ಧಾರವಾಡ ಪೇಢಾ ನೀಡಿ ಆತ್ಮೀವಾಗಿ ಸನ್ಮಾನಿಸಿ, ಅಭಿನಂದಿಸಿ ಶುಭ ಕೋರಿದರು

ಕೋಟ್ಯಾಂತರ ಹಿಂದುಗಳ ಆರಾಧ್ಯ ದೈವ ಪ್ರಭು ಶ್ರೀ ರಾಮನ ಮಂದಿರ ನಿರ್ಮಾಣ ಕಾರ್ಯ ಸುಗಮವಾಗಿ ಸಾಗಲಿ ಹಾಗೂ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಕರ್ನಾಟಕದಿಂದ ತಮ್ಮ ಕಾರ್ಯವು ಯಾವತ್ತೂ ಅಜರಾಮರವಾಗಿರಲಿ.

ಭಗವಂತ ತಮಗೆ ಇನ್ನು ಹೆಚ್ಚಿನ ಆಯುರಾರೋಗ್ಯ ನೀಡಿ ಶೀಘ್ರವಾಗಿ ಪ್ರಭು ಶ್ರೀ ರಾಮಮಂದಿರ ನಿರ್ಮಾಣವಾಗಿ ಶ್ರೀ ರಾಮನ ದರ್ಶನವಾಗಲೆಂದು ಹಾರೈಸಿದ್ರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ