Breaking News

ವಂಚನೆ ಆರೋಪ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿ 7 ಜನ ಆರೋಪಿಗಳ ಪೊಲೀಸ್​ ಕಸ್ಟಡಿ ಇಂದು ಅಂತ್ಯವಾಗಲಿದೆ.

Spread the love

ಬೆಂಗಳೂರು: ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದ ಏಳು ಜನ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ.

ಆರೋಪಿಗಳಾದ ಚೈತ್ರಾ ಕುಂದಾಪುರ, ಗಗನ್, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಹಾಗೂ ಚೆನ್ನನಾಯ್ಕ್​ರನ್ನು ಇಂದು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾಗಿದೆ. ಮಧ್ಯಾಹ್ನದ ವೇಳೆಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಸಿಸಿಬಿ ಪೊಲೀಸರು ಅಗತ್ಯವಿದ್ದಲ್ಲಿ ಮಾತ್ರ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ. ವಂಚನೆ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನವಾಗಿದ್ದ ಚೈತ್ರಾ ಸೇರಿದಂತೆ ಏಳು ಜನ ಆರೋಪಿಗಳ ತಂಡವನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಸೆಪ್ಟೆಂಬರ್ 13 ರಂದು ನಗರದ 1ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿತ್ತು.

 


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ