Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಗುಟ್ಕಾ ತಿಂದು ನೆಲಕ್ಕೆ ಉಗಿದವನ್ ಮುಖಕ್ಕೆ ಉಗಿದ ಕೊರೊನಾ ವಾರಿಯರ್

ಗುಟ್ಕಾ ತಿಂದು ನೆಲಕ್ಕೆ ಉಗಿದವನ್ ಮುಖಕ್ಕೆ ಉಗಿದ ಕೊರೊನಾ ವಾರಿಯರ್

Spread the love

ಚಿಕ್ಕೋಡಿ(ಬೆಳಗಾವಿ): ಗುಡ್ಕಾ ತಿಂದು ರಸ್ತೆಗೆ ಉಗುಳಿದ ವ್ಯಕ್ತಿಗೆ ಕೊರೊನಾ ವಾರಿಯರ್ ಶಿಕ್ಷೆ ನೀಡಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.

ಕೊರೊನಾ ಮಹಾಮಾರಿ ಹರಡುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಕ್ತಿ ಗುಟ್ಕಾ ತಿಂದು ನಿಪ್ಪಾಣಿ ನಗರಸಭೆ ಎದುರು ರಸ್ತೆಗೆ ಉಗುಳಿದ್ದಾನೆ. ಇದನ್ನು ಕೊರೊನಾ ವಾರಿಯರ್ ಒಬ್ಬರು ಗಮನಿಸಿದ್ದಾರೆ. ಅಲ್ಲದೆ ಕೂಡಲೇ ಆತನಿಗೆ ಸ್ಥಳದಲ್ಲಿಯೇ ಶಿಕ್ಷೆ ನೀಡಿದ್ದಾರೆ.

ವ್ಯಕ್ತಿ ಉಗಿದ ಕೂಡಲೇ ಸ್ಥಳಕ್ಕೆ ಬಂದ ಪೌರಾಯುಕ್ತ ಮಹಾವೀರ ಬೋರನ್ನವರ , ಆತನ ಅಂಗಿ ಬಿಚ್ಚಿಸಿ ಅದರಿಂದಲೇ ಉಗಿದ ಜಾಗ ಕ್ಲೀನ್ ಮಾಡಿಸಿದ್ದಾರೆ. ಈ ಮೂಲಕ ಕೊರೊನಾ ಆತಂಕದ ನಡುವೆ ಗುಟ್ಕಾ ತಿಂದು ಉಗುಳುವವರಿಗೆ ಪೌರಾಯುಕ್ತರು ಪಾಠ ಕಲಿಸಿದ್ದಾರೆ.

 


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ