Breaking News

ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ರಾಜಕೀಯ ದುರುದ್ದೇಶ: ಡಿಕೆ ಶಿವಕುಮಾರ್

Spread the love

ಬೆಂಗಳೂರು:  ಯೋಗೇಶ್ ಗೌಡ ಹತ್ಯೆ ಪ್ರಕರಣ ವಿಚಾರಣೆಗಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ ಪೊಲೀಸರು ವರದಿ ನೀಡಿದ್ದಾರೆ  ಎಂದರು.

ಈಗಾಗಲೇ ರಾಜ್ಯ ಪೊಲೀಸರು ಪ್ರಕರಣದ ಕುರಿತಾಗಿ ತನಿಖೆ ನಡೆಸಿದ್ದಾರೆ.ಇದೀಗ ಸಿಬಿಐ ನಡೆಸುತ್ತಿದೆ. ಇವೆಲ್ಲವನ್ನು ಗಮನಿಸಿದರೆ ಸ್ಥಳೀಯ ಬಿಜೆಪಿ ನಾಯಕರಿಗೆ ವಿನಯ್ ಕುಲಕರ್ಣಿಯನ್ನು ರಾಜಕೀಯವಾಗಿ ಮಟ್ಟ ಹಾಕುವ ಉದ್ದೇಶ ಇದೆ ಎಂದು ಆರೋಪಿಸಿದರು.

ಸಿಬಿಐನವರು ರಾಜಕೀಯಕ್ಕೆ ತಲೆಬಾಗಬಾರದು. ಕೆ.ಜೆ. ಜಾರ್ಜ್‌ಗೆ ಸಿಬಿಐನವರು ಎಷ್ಟು ಕಿರುಕುಳ ಕೊಟ್ಟಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ರಾಜಕಾರಣದಲ್ಲಿ ಚಕ್ರ ತಿರುಗುತ್ತಿರುತ್ತದೆ. ಸಿಬಿಐನವರು ರಾಜಕೀಯ ಅಸ್ತ್ರ ಆಗಬಾರದು  ಎಂದು ಹೇಳಿದರು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ