Breaking News
Home / ರಾಜಕೀಯ / ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್​ಗೆ ಷರತ್ತು ಬದ್ದ ಜಾಮೀನು

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್​ಗೆ ಷರತ್ತು ಬದ್ದ ಜಾಮೀನು

Spread the love

ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಇನ್ನು ಬಂಧನವಾಗಿ ಒಂದು ವರ್ಷ ಎರಡು ತಿಂಗಳ ಬಳಿಕ ಅಮೃತ್ ಪೌಲ್ ಗೆ ಜಾಮೀನು ಸಿಕ್ಕಂತೆ ಆಗಿದೆ

ಪಿಎಸ್‌ಐ ನೇಮಕಾತಿ ಹಗರಣ ಹೊರಬಂದ ಬಳಿಕ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ. ಅಮೃತ್ ಪೌಲ್ ಪಿಎಸ್ಐ ಹುದ್ದೆಯ ಆಕಾಂಕ್ಷಿಗಳಿಂದ 1.35 ಕೋಟಿ ರೂಪಾಯಿ ಹಣವನ್ನು ಪಡೆದಿದ್ದಾರೆ ಎಂಬ ಆರೋಪವಿದೆ. ತನಿಖೆ ವೇಳೆ ಈ ಹಣ ತಮ್ಮ ಸಹಾಯಕ ಹಾಗೂ ಬೇನಾಮಿ ಶಂಭುಲಿಂಗ ಸ್ವಾಮಿಗೆ ನೀಡಿದ್ದು ಬೆಳಕಿಗೆ ಬಂದಿತ್ತು. ಈತನಿಂದ 41 ಲಕ್ಷ ರೂ.ಗಳನ್ನು ಸಿಐಡಿ ವಶಪಡಿಸಿಕೊಂಡಿತ್ತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ