ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ನವೆಂಬರ್ 14 ರಿಂದ ನವೆಂಬರ್ 16 ರ ವರೆಗೆ ಆಚರಿಸುವ ದೀಪಾವಳಿ ಹಬ್ಬವನ್ನು ರೋಗಾಣು ಹರಡದಂತೆ ಮುನ್ನೆಚ್ಚ್ಚರಿಕೆ ವಹಿಸಿ ಸರರ್ಕಾರದ ಮಾರ್ಗಸೂಚಿ ಪ್ರಕಾರ ಆಚರಿಸಲು ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ ಅವರು ಆದೇಶಿಸಿದ್ದಾರೆ.
ಮಾರ್ಗಸೂಚಿಗಳು:
ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವನಾಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು, ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 1 ರಿಂದ ನವೆಂಬರ್ 12 ರ ವರೆಗೆ ಮಾತ್ರ ತೆರೆದಿರತಕ್ಕದು.
ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು.
ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ/ ಪ್ರಾಧಿಕಾರಗಳು ಅನುಮತಿಸತಕ್ಕದ್ದು, ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು, ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರÀವಿರಬೇಕು.
ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ / ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿ ಕಾಣುವಂತೆ ಪದರ್ಶಿಸುವುದು ಹಾಗೂ ಪರವಾನಗಿ ಪತ್ರವನ್ನು ಪಡೆದಂತವರು ಕಾಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.
ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನೀಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಪಟಾಕಿ ಮಾರುವ ವ್ಯಾಪಾರಸ್ಯರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿತಕ್ಕದು.
ಪಟಾಕಿ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು ಹಾಗೂ ಕೋವಿಡ್ -19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿ ಗಳನ್ನು ತಮ್ಮದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಕಾರ್ಪೋರೇಷನ್ ಇಲಾಖೆ/ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡಾಯವಾಗಿ ಪಾಲಿಸತಕ್ಕದ್ದು.
ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹೀರೆಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.