Breaking News

ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಉರುಳುವ ಹಂತದಲ್ಲಿರುವ ಬೃಹತ್ ಮರಗಳು : ತೆರವುಗೊಳಿಸಲು ಸಾರ್ವಜನಿಕರ ಒತ್ತಾಯ

Spread the love

ಬೆಳಗಾವಿ : ನಗರ ವ್ಯಾಪ್ತಿಯಲ್ಲಿ ಹಲವು ಬೃಹತ್​ ಮರಗಳು ಉರುಳುವ ಹಂತ ತಲುಪಿದ್ದು, ಈ ಮರಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಹಿಂದೆ ಬಿರುಗಾಳಿ ಸಹಿತ ಭಾರಿ ಮಳೆಗೆ ನಗರ ವ್ಯಾಪ್ತಿಯಲ್ಲಿ ಹಲವು ಕಡೆ ಮರಗಳು ಉರುಳಿ ಜೀವಹಾನಿ ಸಂಭವಿಸಿತ್ತು. ಆದರೂ ಅರಣ್ಯ ಇಲಾಖೆ ಮತ್ತು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕಳೆದ 2022ರ ಸೆಪ್ಟೆಂಬರ್​ನಲ್ಲಿ ಬೆಳಗಾವಿ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿತ್ತು. ಸೆಪ್ಟೆಂಬರ್ 13ರಂದು ಭಾರಿ ಮಳೆಗೆ ನಗರದ ಆರ್​ಟಿಓ ವೃತ್ತದ ಬಳಿಯ ಕೋರ್ಟ್​ ರಸ್ತೆಯಲ್ಲಿ ಹಳೆ ಮರವೊಂದು ಬೈಕ್ ಮೇಲೆ ಹೋಗುತ್ತಿದ್ದ ರಾಕೇಶ್ ಎಂಬವರ ಮೇಲೆ ಬಿದ್ದಿತ್ತು. ಇದರಿಂದಾಗಿ ರಾಕೇಶ್​ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆ ಬಳಿಕ ಜೀವಹಾನಿಗೆ ಕಾರಣವಾಗುವ ಹಳೆ ಮರಗಳನ್ನು ಗುರುತಿಸಿ ತೆರವುಗೊಳಿಸುವ ಕಾರ್ಯವನ್ನು ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕಿತ್ತು. ಆದರೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತದೇ ಕೋರ್ಟ್ ರಸ್ತೆಯಲ್ಲಿ ಮತ್ತೊಂದು ಹಳೆ ಮರ ಧರೆಗುರುಳುವ ಹಂತದಲ್ಲಿದೆ. ಈ ಮರದ ದೊಡ್ಡ ಕೊಂಬೆಯೊಂದು ಜೋರಾದ ಗಾಳಿ ಬೀಸಿದರೆ ನೆಲಕ್ಕುರುಳುವ ಸಾಧ್ಯತೆ ಇದೆ. ಈ ರಸ್ತೆಯಲ್ಲಿ ನಿತ್ಯ ಸಾವಿರಾರು ಜನ ಓಡಾಡುತ್ತಾರೆ. ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಶಾಲಾ, ಕಾಲೇಜುಗಳಿಗೆ ತೆರಳುತ್ತಾರೆ. ಅಲ್ಲದೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿ, ಕೋರ್ಟ್​ಗೆ ಇದೇ ರಸ್ತೆಯನ್ನು ಉಪಯೋಗಿಸುತ್ತಾರೆ. ಆದ್ದರಿಂದ ಈ ಮರವನ್ನೂ ಅನಾಹುತ ಸಂಭವಿಸುವುದಕ್ಕೆ ಮುನ್ನ ತೆರವುಗೊಳಿಸಬೇಕಾಗಿದೆ ಅನ್ನೋದು ಸಾರ್ವಜನಿಕರ ಒತ್ತಾಯವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯರಾದ ವೀಣಾ ಕೇಳ್ಕರ್​, ಹೋದ ವರ್ಷ ನನ್ನ ಕಣ್ಣ ಮುಂದೆಯೇ ಯುವಕನೋರ್ವ ಮರ ಬಿದ್ದು ಸಾವನ್ನಪ್ಪಿದ್ದ. ಈ ರಸ್ತೆಯಲ್ಲಿ ಮಕ್ಕಳು ಸೇರಿ ಬಹಳಷ್ಟು ಜನ ಓಡಾಡುತ್ತಿರುತ್ತಾರೆ. ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ನಗರದಲ್ಲಿ ಎಲ್ಲೆಲ್ಲಿ ಒಣಗಿದ ಮರಗಳಿವೆಯೋ ಅವುಗಳನ್ನು ತೆರವುಗೊಳಿಸುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು‌.


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ