Breaking News

ಕಾವೇರಿ ಕಿಚ್ಚು: ರೈತರ ಹೋರಾಟಕ್ಕೆ ಹಿರಿಯ ನಟಿ ಲೀಲಾವತಿ ಸಾಥ್

Spread the love

ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದ ಬೆನ್ನಲ್ಲೇ ಸಕ್ಕರೆ ನಗರಿ ಮಂಡ್ಯದಲ್ಲಿ ಅನ್ನದಾತರನ್ನ ಕೆರಳುವಂತೆ ಮಾಡಿದೆ. ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಸೋಮವಾರ ರೈತರ ಹೋರಾಟಕ್ಕೆ ಕಮಲಪಡೆ ಹಾಗೂ ಚಿತ್ರನಟರು ಸಾಥ್ ನೀಡಿದ್ರು.

ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಸೋಮವಾರ ರೈತರ ಹೋರಾಟಕ್ಕೆ ಕಮಲಪಡೆ ಹಾಗೂ ಚಿತ್ರನಟರು ಸಾಥ್ ನೀಡಿದ್ರು. ಹೋರಾಟದ ಕಾವು ಉಗ್ರ ಸ್ವರೂಪ ಪಡೆದಿತ್ತು.

ಶಾಸಕ ಬಿ ವೈ ವಿಜಯೇಂದ್ರ

ಹೌದು, ಸಕ್ಕರೆನಗರಿ ಮಂಡ್ಯದಲ್ಲಿ ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಇವತ್ತು ರೈತರ ಹೋರಾಟಕ್ಕೆ ಕಮಲಪಡೆ ಸಾಥ್ ನೀಡಿತ್ತು. ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ನಾಯಕರು ಸಾಥ್ ನೀಡಿದ್ರು. ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ರು.

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಚಡ್ಡಿ ಚಳವಳಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ಈ ಹೋರಾಟದಲ್ಲಿ ಮಾಜಿ ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ್, ಶಾಸಕ ಬಿ ವೈ ವಿಜಯೇಂದ್ರ ಸಾಥ್ ನೀಡಿದ್ರು. ಮಂಡ್ಯದ ಬಿಜೆಪಿ ಕಚೇರಿಯಿಂದ ಸಂಜಯ ಸರ್ಕಲ್ ಮೂಲಕ ಹಿತರಕ್ಷಣಾ ಸಮಿತಿ ನಡೆಸಿದ ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಚಡ್ಡಿ ಚಳವಳಿ ನಡೆಸಿ, ರೈತರ ಹೋರಾಟಕ್ಕೆ ಬೆಂಬಲ ನೀಡಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.

ಸಂಕಷ್ಟ ಸೂತ್ರ ಅನಿವಾರ್ಯ- ನಟ ವಿನೋದ್ ರಾಜ್​.. ಇನ್ನು ಕಾವೇರಿ ನೀರನ್ನು ಹರಿಸುತ್ತಿರುವುದನ್ನು ವಿರೋಧಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಧರಣಿಗೆ ಇವತ್ತು ಹಿರಿಯನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಕೂಡ ಸಾಥ್ ನೀಡಿದ್ರು. ಅನಾರೋಗ್ಯ, ಇಳಿವಯಸ್ಸಿನಲ್ಲೂ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ್ರು. ಇನ್ನು ಇದೇ ವೇಳೆ ಮಾತನಾಡಿದ ನಟ ವಿನೋದ್​ ರಾಜ್, ಪ್ರತಿ ಬಾರಿ ಕೂಡ ನಮಗೆ ಅನ್ಯಾಯವಾಗುತ್ತಿದೆ. ಸಂಕಷ್ಟಸೂತ್ರ ಅನಿರ್ವಾಯ ಎಂದರು.


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ