Breaking News
Home / ರಾಜಕೀಯ / ಕಾವೇರಿ ನೀರು ಬಿಡುಗಡೆ ವಿರುದ್ಧ ಕರ್ನಾಟಕ ಬಂದ್ ಅಗತ್ಯವಿಲ್ಲ: ಗೃಹ ಸಚಿವ ಡಾ.‌ಜಿ ಪರಮೇಶ್ವರ್

ಕಾವೇರಿ ನೀರು ಬಿಡುಗಡೆ ವಿರುದ್ಧ ಕರ್ನಾಟಕ ಬಂದ್ ಅಗತ್ಯವಿಲ್ಲ: ಗೃಹ ಸಚಿವ ಡಾ.‌ಜಿ ಪರಮೇಶ್ವರ್

Spread the love

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ ಎಂದು‌ ಗೃಹ ಸಚಿವ ಡಾ.‌ ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾಯಾಲಯ ಕೂಡ ಬಂದ್ ಮಾಡಬಾರದು ಎಂದು ಹೇಳಿದೆ. ಆದರೆ, ಪ್ರತಿಭಟನೆ ಮಾಡಬಹುದು. ಪ್ರತಿಭಟನೆ ಅವರ ಹಕ್ಕು.‌ ಸಂಘಟನೆಗಳಿಗೆ ಕರ್ನಾಟಕ ಬಂದ್ ಬೇಡ ಎಂದು ಮನವಿ ಮಾಡಿದ್ದೇವೆ. ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ಬಂದ್​ಗೆ ಬೆಂಬಲ ಕೊಡುತ್ತಿದ್ದಾವೆ. ಇಂತಹ ಸಂದರ್ಭದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೋಗಬಾರದು. ಬಂದ್ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಸೂಕ್ತವಾದ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಮಂಗಳವಾರ ಒಂದು ದಿನದ ಬೆಂಗಳೂರು ಬಂದ್​ನಿಂದ ಅಂದಾಜು‌ 1,000 ರಿಂದ 2000 ಕೋಟಿ ರೂ. ನಷ್ಟವಾಗಿದೆ. ಇವತ್ತು ರಜೆ ಇದೆ. ನಾಳೆಯು ಬಂದ್ ಮಾಡಿದರೆ ಮತ್ತಷ್ಟು ಸಮಸ್ಯೆ ಆಗಲಿದೆ. ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಬಂದ್ ಮಾಡುತ್ತಿದ್ದಾರಾ ಅಥವಾ ಬೇರೆಯವರು ಅವರ ಮೇಲೆ ಒತ್ತಡ ಹೇರುತ್ತಿದ್ದಾರಾ ಗೊತ್ತಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

 

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬಂದ್​ಗೆ ಕರೆ ಕೊಟ್ಟಿವೆ. ಇತ್ತ ಬಂದ್​ಗೆ ಬಿಜೆಪಿ ಹಾಗೂ ಜೆಡಿಎಸ್ ಕೂಡ ಬೆಂಬಲ ನೀಡಿದೆ. ಈ‌ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮಂಗಳವಾರವಷ್ಟೇ ಬೆಂಗಳೂರು ಬಂದ್ ನಡೆದಿತ್ತು. ಇದೀಗ ವಾರದಲ್ಲೇ ಎರಡನೇ ಬಂದ್​ಗೆ ಕರೆ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ