Breaking News
Home / ಜಿಲ್ಲೆ / ಬೆಂಗಳೂರು / ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು

ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು

Spread the love

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಎಂಜಿನಿಯರಿಂಗ್, ಪದವಿ, ಸ್ನಾತ್ತಕೋತ್ತರ ಪದವಿಗೆ ಪರೀಕ್ಷೆ ನಡೆಸಬೇಕಾಗಿತ್ತು. ಆದರೆ ಕೊರೊನಾದಿಂದ ತಡವಾಗಿತ್ತು. ಹೀಗಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ಕ್ರಮವಹಿಸಿದ್ದೇವೆ. ಆನ್‍ಲೈನ್ ಶಿಕ್ಷಣ, ಡಿಜಿಟಲ್ ಮೂಲಕ ಶಿಕ್ಷಣ ನೀಡಲಾಗಿದೆ. ಅನೇಕ ಮಾರ್ಗದಲ್ಲಿ ಶಿಕ್ಷಣ ನೀಡಲಾಗಿದೆ. ವಿವಿಗಳಲ್ಲಿ ಅಗತ್ಯ ಪಾಠ ಮಾಡಲಾಗಿದೆ. ಕೆಲವರಿಗೆ ನೆಟ್ ಸಮಸ್ಯೆ ಅಂತ ಹೇಳಲಾಗುತ್ತಿದೆ ಎಂದರು.

ಎಂಜಿನಿಯರಿಂಗ್ 1, 2, 3 ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ. ಪದವಿ 1, 2 ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲ. ಅದೇ ರೀತಿ ಡಿಪ್ಲೋಮಾ 1, 2, ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲ. ಮೊದಲ ವರ್ಷದ ಸ್ನಾತಕೋತ್ತರ ಪದವಿ ಪರೀಕ್ಷೆ ಇಲ್ಲ. ಅಂತಿಮ ವರ್ಷದ ಪರೀಕ್ಷೆ ಬಿಟ್ಟು ಯಾರಿಗೂ ಪರೀಕ್ಷೆ ಇಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ವಿವಿಗಳು ಪರೀಕ್ಷೆ ಮಾಡಬೇಕು.
ಬ್ಯಾಕ್ ಸಬ್ಜೆಕ್ಟ್ ಇದ್ದರೆ ಫೈನಲ್ ಪರೀಕ್ಷೆಯಲ್ಲಿ ಬರೆಯಬೇಕು. ಸೆಪ್ಟೆಂಬರ್‍ನಲ್ಲಿ ಅಂತಿಮ ವರ್ಷದ ಪರೀಕ್ಷೆ ಮಾಡಬೇಕು ಎಂದು ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

ಸೆಪ್ಟೆಂಬರ್ ನಲ್ಲಿ ಪರೀಕ್ಷೆ ಬರೆಯಲು ಇಷ್ಟ ಇಲ್ಲದೆ ಇರೋರಿಗೆ ಮುಂದಿನ ಪರೀಕ್ಷೆ ಬರೆಯಲು ಅವಕಾಶ. ಫ್ರೆಶ್ ಅಭ್ಯರ್ಥಿಗಳಾಗಿ ಬರೆಯಬಹುದು. ಇಂಟರನಲ್ ಅಸೆಸ್ಮೆಟ್, ಹಿಂದಿನ ವರ್ಷದ ಪರೀಕ್ಷೆ ಆಧಾರದಲ್ಲಿ ಪಾಸ್ ಮಾಡುತ್ತೇವೆ. ಇಂಟರನಲ್ ಅಸೆಸ್ಮೆಟ್ 50% ಹಿಂದಿನ ಪರೀಕ್ಷೆ 50% ಆಧಾರದಲ್ಲಿ ಪಾಸ್ ಮಾಡುತ್ತೀವಿ. ಆರೋಗ್ಯ, ಸುರಕ್ಷಿತೆ ದೃಷ್ಟಿಯಿಂದ ಪರೀಕ್ಷೆ ರದ್ದು ಮಾಡಿದ್ದೇವೆ. ಕೇಂದ್ರ ಸರ್ಕಾರ ನಮಗೆ ಅವಕಾಶ ಕೊಟ್ಟಿತ್ತು. ಹೀಗಾಗಿ ನಾವು ಈ ನಿರ್ಧಾರ ಮಾಡಿದ್ದೇವೆ ಎಂದರು.

ಇಂಟರನಲ್ ಅಸೆಸ್ಮೆಟ್ ಮಾಡಲು ಅವಕಾಶ ಮಾಡಲು ಅವಕಾಶ ಇದೆ. ಆನ್‍ಲೈನ್, ಆಫ್‍ಲೈನ್ ಮೂಲಕ ಮಾಡಬಹುದು. ಪರೀಕ್ಷೆ ಕೂಡ ಆನ್‍ಲೈನ್, ಆಫ್‍ಲೈನ್ ಮಾಡಬಹುದು ಎಂದು ತಿಳಿಸಿದರು.

2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್‍ಗೆ ಸೆಪ್ಟೆಂಬರ್ 1 ರಿಂದಲೇ ಆನ್‍ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ. ಪ್ರತಿ ವಿವಿಯಲ್ಲಿ ಹೆಲ್ತ್‍ಲೈನ್ ಪ್ರಾರಂಭ ಮಾಡಲಾಗಿದೆ. ಅಗತ್ಯ ಮಾಹಿತಿ ಸಂಗ್ರಹ ಮಾಡಲು ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಲು ಹೆಲ್ಪ್‍ಲೈನ್‍ಗೆ ಫೋನ್ ಮಾಡಬಹುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಸಿಇಟಿ ಪರೀಕ್ಷೆ ಜುಲೈ 30, 31ಕ್ಕೆ ನಡೆಯುತ್ತೆ. ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿಇಟಿ ಪರೀಕ್ಷೆಗೂ ಹೆಲ್ತ್ ಲೈನ್ ಮಾಡುತ್ತೇವೆ. ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಬಹುದು. ಪಿಜಿಸಿಇಟಿ ಆಗಸ್ಟ್ 8, 9 ನಡೆಯುತ್ತೆ. ಡಿಪ್ಲೋಮಾ ಸಿಇಟಿ ಆಗಸ್ಟ್ 9ಕ್ಕೆ ನಡೆಯುತ್ತೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಕುಲಪತಿಗಳು, ಶಿಕ್ಷಣ ತಜ್ಞರ ಜೊತೆ ಚರ್ಚೆ ಮಾಡಿ ಈ ನಿರ್ಧಾರ ಮಾಡಲಾಗಿದೆ. ರಾಜ್ಯಪಾಲರ ಅನುಮತಿ ಪಡೆದು, ಯುಜಿಸಿ ಸಲಹೆ ಪಡೆದು ಈ ನಿರ್ಧಾರ ಮಾಡಲಾಗಿದೆ ಎಂದು ಡಿಸಿಎಂ ತಿಳಿಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ