Breaking News

ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ – ಎಸಿಬಿ ಬಲೆಗೆ ಬಿದ್ದ ಲೇಡಿ ಆಫೀಸರ್

Spread the love

ಬೀದರ್: ವರ್ಗಾವಣೆ ಮಾಡಿಸಲು ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ ಪಡೆಯುವಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ತಾಲೂಕಾಧಿಕಾರಿ ಎಸಿಬಿ ಬಲೆಗೆ ಬಿದಿದ್ದಾರೆ.

ವರ್ಗಾವಣೆ ಮಾಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಶೋಭಾ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮುಂಗಡವಾಗಿ 30 ಸಾವಿರ ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ತಾಲೂಕಾಧಿಕಾರಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ.

ಹುಮ್ನಬಾದ್ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಶೋಭಾ ವಿರುದ್ಧ ಸಿದ್ದಾರ್ಥ ಧಾನಾಜೀ ಎಂಬುವರು ಎಸಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಎಸಿಬಿ ಪೊಲೀಸರು ದಾಳಿ ಮಾಡಿ ಲಂಚದ ಸಮೇತ ತಾಲೂಕಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಎಸಿಬಿ ಎಸ್‍ಪಿ ಮಹೇಶ್ ಮೇಗಣ್ಣನವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.


Spread the love

About Laxminews 24x7

Check Also

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Spread the loveಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು  ಬಡಿದು ಯುವರೈತ  ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ