Breaking News
Home / ಜಿಲ್ಲೆ / ಬೀದರ್ / ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ – ಎಸಿಬಿ ಬಲೆಗೆ ಬಿದ್ದ ಲೇಡಿ ಆಫೀಸರ್

ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ – ಎಸಿಬಿ ಬಲೆಗೆ ಬಿದ್ದ ಲೇಡಿ ಆಫೀಸರ್

Spread the love

ಬೀದರ್: ವರ್ಗಾವಣೆ ಮಾಡಿಸಲು ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ ಪಡೆಯುವಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ತಾಲೂಕಾಧಿಕಾರಿ ಎಸಿಬಿ ಬಲೆಗೆ ಬಿದಿದ್ದಾರೆ.

ವರ್ಗಾವಣೆ ಮಾಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಶೋಭಾ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮುಂಗಡವಾಗಿ 30 ಸಾವಿರ ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ತಾಲೂಕಾಧಿಕಾರಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ.

ಹುಮ್ನಬಾದ್ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಶೋಭಾ ವಿರುದ್ಧ ಸಿದ್ದಾರ್ಥ ಧಾನಾಜೀ ಎಂಬುವರು ಎಸಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಎಸಿಬಿ ಪೊಲೀಸರು ದಾಳಿ ಮಾಡಿ ಲಂಚದ ಸಮೇತ ತಾಲೂಕಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಎಸಿಬಿ ಎಸ್‍ಪಿ ಮಹೇಶ್ ಮೇಗಣ್ಣನವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.


Spread the love

About Laxminews 24x7

Check Also

ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದಪಾಗಲ್​ ಪ್ರೇಮಿ

Spread the loveಬೀದರ್ : ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯೊಬ್ಬ (Lover) ತಾನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ