ಕಲಬುರಗಿ, (ಅಕ್ಟೋಬರ್ 03): ಗ್ಯಾರಂಟಿ ಯೋಜನೆಗಳ ಆರ್ಥಿಕ ಭಾರದಿಂದ ನಲುಗುತ್ತಿರುವ ಸಿದ್ದರಾಮಯ್ಯನವರ (Siddaramaiah) ಕಾಂಗ್ರೆಸ್ ಸರ್ಕಾರ, ಅಬಕಾರಿ ಇಲಾಖೆ ಮೂಲದಿಂದ ಹೆಚ್ಚಿನ ಆದಾಯ ಗಳಿಸಲು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ(liquor shops) ಪರವಾನಗಿ ನೀಡಲು ಚಿಂತನೆ ನಡೆಸಿದೆ. ಆದ್ರೆ, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖುದ್ದು ಮಹಿಳೆಯರೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಖುದ್ದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್, ತಮ್ಮ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
