Breaking News

ತೆರಿಗೆ ವಂಚನೆ ಆರೋಪ: ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ಐಟಿ ದಾಳಿ, ದಾಖಲೆಗಳ ಪರಿಶೀಲನೆ

Spread the love

ಬೆಂಗಳೂರು : ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದ್ದು, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ, ಉದ್ಯಮಿಗಳ ಒಡೆತನದ ಸಂಸ್ಥೆಗಳ ಮೇಲೂ ದಾಳಿ ಮಾಡಲಾಗಿದೆ.

ಚೆನ್ನೈ, ದೆಹಲಿಯಿಂದ ರಾತ್ರೋರಾತ್ರಿ ಬೆಂಗಳೂರಿಗೆ ಬಂದಿರೋ ಐಟಿ ಅಧಿಕಾರಿಗಳು, ವಿಜಯನಗರ ಬಿಟಿಎಂ, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಖಾಸಗಿ ಕಂಪನಿಗಳು ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಹಾಗೂ ಕಚೇರಿಗಳ‌ ಮೇಲೆ ದಾಳಿ‌ ನಡೆಸಿರುವ ಮಾಹಿತಿ ಲಭ್ಯವಾಗಿದೆ.

ದಂತ ವೈದ್ಯೆಯೊಬ್ಬರ ಮನೆ ಮೇಲೆ ಐಟಿ ದಾಳಿ‌ ನಡೆಸಲಾಗಿದೆ. ಪ್ರಶಾಂತ ನಗರದಲ್ಲಿ ನಿವಾಸ, ವಿಜಯನಗರದಲ್ಲಿ ಕ್ಲಿನಿಕ್ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ