Breaking News

ಕಾದಾಟದಲ್ಲಿ ಬಾಲ ಕಳೆದುಕೊಂಡು ನೋವು ತಾಳಲಾರದೆ ನೀರಲ್ಲಿಯೇ ನಿಂತ ಸಲಗ

Spread the love

ಚಾಮರಾಜನಗರ: ಕಾದಾಟದಲ್ಲಿ ಬಾಲ ಕಳೆದುಕೊಂಡ ಆನೆ ನೋವು ತಾಳಲಾರದೆ ನದಿಗಿಳಿದು ನೀರಲ್ಲಿಯೇ ನಿಂತ ಘಟನೆ ಚಾಮರಾಜನಗರದ ಕಾವೇರಿ ವನ್ಯ ಜೀವಿ ವ್ಯಾಪ್ತಿಯಲ್ಲಿ ನಡೆದಿದೆ.

ಕಾವೇರಿ ವನ್ಯಧಾಮದ ಭೀಮೇಶ್ವರಿ ಕಳ್ಳಭೇಟೆ ಶಿಬಿರದ ಬಳಿ ಈ ಘಟನೆ ನಡೆದಿದ್ದು, ಬಾಲ ತುಂಡಾಗಿ ಗಾಯವಾಗಿರುವ ಆನೆ ನೊಣಗಳ ಹಾವಳಿ ಹಾಗೂ ನೋವು ತಾಳಲಾರದೆ ನದಿಗಿಳಿದಿದೆ. ಈ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದೆ.

ಗಾಯಗೊಂಡಿರುವ ಆನೆ ಮೇಲೆ ನಿಗಾ ಇಟ್ಟಿರುವ ಅರಣ್ಯ ಸಿಬ್ಬಂದಿ ದಸರಾ ಆನೆಗಳಾದ ಅಭಿಮನ್ಯು ಹಾಗು ಕೃಷ್ಣ ಆನೆಯನ್ನು ಕರೆಸಿಕೊಂಡಿದ್ದಾರೆ. ಈ ಆನೆಗಳ ಮೂಲಕ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಮೂರು ಟೀಂ ರಚನೆ ಮಾಡಿ ಆನೆಯ ಹುಡುಕಾಟ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಸಂಗಂ ವಲಯ ವ್ಯಾಪ್ತಿಯಲ್ಲಿ ಆನೆ ಬೀಡು ಬಿಟ್ಟಿರುವ ಸಾಧ್ಯತೆಯಿದ್ದು, ಸೆರೆಹಿಡಿದು ಚಿಕಿತ್ಸೆ ನೀಡಲೂ ಪ್ಲಾನ್ ಮಾಡಿದ್ದಾರೆ.


Spread the love

About Laxminews 24x7

Check Also

ಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ: ₹20 ಕೋಟಿ ಮಾನನಷ್ಟ ಕೇಸ್‌

Spread the loveಬೆಳಗಾವಿ: ಅಸ್ತಿತ್ವದಲ್ಲಿ ಇಲ್ಲದ ಖಾಸಗಿ ಮಾಧ್ಯಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಯನ್ನು ಅಪಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ