Breaking News

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ

Spread the love

ಮಂಗಳೂರು (ದಕ್ಷಿಣ ಕನ್ನಡ): ಮೂರು ವರ್ಷದ ಬಳಿಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಮತ್ತು ನಿರ್ವಹಣೆ ಅಕ್ಟೋಬರ್​ 31ರಿಂದ ದೇಶದ ಪ್ರತಿಷ್ಠಿತ ಉದ್ದಿಮೆ ಕಂಪನಿ ಅದಾನಿ ಗ್ರೂಪ್ ತೆಕ್ಕೆಗೆ ಸೇರಲಿದೆ.

ಇನ್ನು ಮುಂದೆ ಈ ಏರ್​ಪೋರ್ಟ್​ನ ಆಗುಹೋಗುಗಳು ಅದಾನಿ ಸಮೂಹದಿಂದಲೇ ನಡೆಯಲಿದೆ.

2020ರ ಅಕ್ಟೋಬರ್​ 31ರಂದು ಮಂಗಳೂರು ಸೇರಿದಂತೆ ಅಹಮದಾಬಾದ್, ಲಕ್ನೋ, ಜೈಪುರ, ಗುವಾಹಟಿ ಹಾಗೂ ತ್ರಿವೆಂಡ್ರಂ ವಿಮಾನ ನಿಲ್ದಾಣಗಳ ಆಡಳಿತವನ್ನು ಅದಾನಿ ಗ್ರೂಪ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ದೇಶದ ಆರು ವಿಮಾನ ನಿಲ್ದಾಣಗಳ ಪೈಕಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಥಮವಾಗಿ ಅದಾನಿ ಗ್ರೂಪ್ ಕೈ ವಶವಾಗಿತ್ತು.

ಬಳಿಕ ಅದು ಅದಾನಿ ಗ್ರೂಪ್​ನ ಮಂಗಳೂರು ಇಂಟರ್​ನ್ಯಾಷನಲ್ ಏರ್​ಪೋರ್ಟ್ ಲಿಮಿಟೆಡ್ ಆಗಿ ಬದಲಾಗಿತ್ತು. ನಂತರ ಅಹಮದಾಬಾದ್, ಲಕ್ನೋ, ಜೈಪುರ, ಗುವಾಹಟಿ ಹಾಗೂ ತ್ರಿವೆಂಡ್ರಂ ವಿಮಾನ ನಿಲ್ದಾಣಗಳನ್ನು ಅದಾನಿ ತೆಕ್ಕೆಗೆ ತೆಗೆದುಕೊಂಡಿತ್ತು. ಮುಂಬೈ ವಿಮಾನ ನಿಲ್ದಾಣವನ್ನು 2020ರ ಜುಲೈನಲ್ಲಿ ಅದಾನಿ ಕಂಪನಿಯು ಜಿವಿಕೆ ಕೈನಿಂದ ತೆಗೆದುಕೊಂಡಿತ್ತು.

ಕನ್ಸೆಷನ್ ಒಪ್ಪಂದದ ಪ್ರಕಾರ ಮೂರು ವರ್ಷಗಳವರೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅರ್ಧದಷ್ಟು ಸಿಬ್ಬಂದಿ ಹಾಗೂ ಅದಾನಿ ಸಿಬ್ಬಂದಿ ಜೊತೆಯಾಗಿಯೇ ಕೆಲಸ ಮಾಡಿದ್ದಾರೆ. ಇದೀಗ ಒಪ್ಪಂದದ ಅವಧಿ ಅಕ್ಟೋಬರ್​ 30ಕ್ಕೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ಇಡೀ ವಿಮಾನ ನಿಲ್ದಾಣದ ಆಡಳಿತ ಅದಾನಿ ಗ್ರೂಪಿಗೆ ಸೇರಲಿದೆ.

ಏರ್​ಪೋರ್ಟ್​ ಅದಾನಿ ತೆಕ್ಕೆಗೆ ಸೇರ್ಪಡೆಗೊಂಡ ವೇಳೆ 118 ಮಂದಿ ಎಎಐ ಸಿಬ್ಬಂದಿ ಇದ್ದರು. ಅವರಲ್ಲಿ 97 ಮಂದಿಯನ್ನು ಉಳಿಸಿಕೊಳ್ಳಲಾಗಿತ್ತು. ಇವರೆಲ್ಲ ಎಜಿಎಂ ಹಾಗೂ ಕೆಳಗಿನ ಹಂತದವರಾಗಿದ್ದರು. ಅವರೆಲ್ಲ ಹಣಕಾಸು, ಎಚ್‌ಆರ್, ಆಡಳಿತ, ವಾಣಿಜ್ಯ, ಅಗ್ನಿಶಾಮಕ, ಟರ್ಮಿನಲ್ ಸೇರಿದಂತೆ ಆರು ವಿಭಾಗಗಳಲ್ಲಿ ಅದಾನಿ ಸಿಬ್ಬಂದಿಯೊಂದಿಗೆ ಜತೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈಗ ಒಪ್ಪಂದ ಅವಧಿ ಮುಕ್ತಾಯಗೊಳ್ಳುತ್ತಿರುವುದರಿಂದ ಆ 97 ಮಂದಿಯನ್ನು ಬೇರೆ ಬೇರೆ ವಿಮಾನ ನಿಲ್ದಾಣಗಳಿಗೆ ವರ್ಗಾವಣೆಗೊಳಿಸಲಾಗಿದೆ. ಇನ್ನು ಈ ಆರು ವಿಭಾಗ ಕೂಡ ಅದಾನಿ ಗ್ರೂಪಿನ ಆಡಳಿತಕ್ಕೆ ಒಳಪಡಲಿದೆ. ಆದರೆ, ಏರ್‌ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಹಾಗೂ ಸಿಎನ್‌ಎಸ್ (ಕಮ್ಯುನಿಕೇಷನ್ ನೇವಿಗೇಷನ್ ಅಂಡ್ ಸರ್ವೆಲೆನ್ಸ್) ಮಾತ್ರ ಅದಾನಿ ಗ್ರೂಪಿಗೆ ಸೇರುವುದಿಲ್ಲ.

ಈ ಬಗ್ಗೆ ಈಟಿವಿ ಭಾರತ ಜೊತೆಗೆ ‌ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ಮಾತನಾಡಿ, “ಕನ್ಸೆಷನ್ ಅಗ್ರಿಮೆಂಟ್ ಪ್ರಕಾರ 6 ವಿಮಾನ‌ ನಿಲ್ದಾಣಗಳ ಆಡಳಿತ ಮತ್ತು ನಿರ್ವಹಣೆ 50 ವರ್ಷದ ಲೀಸ್​ಗೆ ಕೊಡಲಾಗಿದೆ. ಅಗ್ರಿಮೆಂಟ್ ಪ್ರಕಾರ 50 ವರ್ಷ ಅಭಿವೃದ್ಧಿ ಮಾಡಲಾಗುತ್ತದೆ. ಈ ಅಗ್ರಿಮೆಂಟ್ ಪ್ರಕಾರ ಎಎಐ ಸಿಬ್ಬಂದಿ ನಮ್ಮ ಜೊತೆಗೆ ಇದ್ದರು. ಅವರನ್ನು ಇದೀಗ ವರ್ಗಾವಣೆ ಮಾಡಲಾಗಿದ್ದು, ಅಕ್ಟೋಬರ್ 30ರ ನಂತರ ಪೂರ್ಣ ಕಾರ್ಯನಿರ್ವಹಣೆ ಅದಾನಿ ಗ್ರೂಪಿಗೆ ಸೇರಲಿದೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ