Breaking News

ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಮಾರಾಟ,  ಹಚ್ಚುವುದು ನಿಷೇಧ

Spread the love

ಬೆಂಗಳೂರು:  ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಮಾರಾಟ,  ಹಚ್ಚುವುದು ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

 ಕೊರೊನಾ ಸೋಂಕು ರಾಜ್ಯದಲ್ಲಿ ಕ್ರಮೇಣ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಪರಿಸರ ಮಾಲಿನ್ಯ ವಾಗಲಿದೆ. ಜತೆಗೆ ಗುಂಪು ಗುಂಪು ಸೇರುವುದರಿಂದ ಅಂತರ, ಮಾಸ್ಕ್ ಧರಿಸದೆ ಇರುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಆದ ಕಾರಣ ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ನಗರದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಸಿಎಂ ಅವರು, ಕರ್ನಾಟಕದಲ್ಲಿ ಈ ವರ್ಷ ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚುವಂತಿಲ್ಲ.  ಶೀಘ್ರದಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗುತ್ತದೆ ಎಂದಿದ್ದಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ