Breaking News

ಬಾಗಲಕೋಟೆ: RSS ಮುಖಂಡ ಹೃದಯಾಘಾತದಿಂದ ಕಾರಿನಲ್ಲೇ ಸಾವು

Spread the love

ಬಾಗಲಕೋಟೆ: ಆರ್​ಎಸ್​ಎಸ್​ ಮುಖಂಡರೊಬ್ಬರು ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ.

ಸಿದ್ದು ಚಿಕ್ಕದಾನಿ ಮುಧೋಳ (55) ಮೃತರು. ಇವರು ಆರ್​​ಎಸ್​ಎಸ್​ನಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಸಿದ್ದು ಕಳೆದ ರಾತ್ರಿ ಬಾಗಲಕೋಟೆ ಹೋಗಿ ವಾಪಸ್​ ಬರುವಾಗ ಈ ಘಟನೆ ಸಂಭವಿಸಿದೆ.

ಮುಧೋಳ ಪಟ್ಟಣದ ನಿವಾಸಿಯಾಗಿರುವ ಇವರು, ಶಿವಾಜಿ ಸರ್ಕಲ್ ಬಳಿ ಮಂಜುನಾಥ ಮೊಬೈಲ್ ಶಾಪ್ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಲೋಕಾಪೂರ ಪಟ್ಟಣದ ಸಮೀಪ ಇರುವ ಎಸ್‌ಆರ್ ಪೆಟ್ರೋಲ್ ಪಂಪ್​ನಲ್ಲಿ ಡೀಸೆಲ್​ ಹಾಕಿಸಿಕೊಂಡು ಹೊರಡುವ ಸಮಯದಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸ್ವಲ್ಪ ಸಮಯ ವಿಶ್ರಾಂತಿ ಪಡೆಯಲು ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಆದರೆ, ತೀವ್ರ ಹೃದಯಾಘಾತದಿಂದ ಅವರು ಕಾರಲ್ಲೇ ಮೃತಪಟ್ಟಿದ್ದಾರೆ.

ಮುಂಜಾನೆ ಸಮಯದಲ್ಲಿ ಪೆಟ್ರೋಲ್​ ಬಂಕ್​ನ ಕೆಲಸಗಾರರು ಬಂದು ನೋಡಿದಾಗ ಸಿದ್ದು ಅವರು ಮೃತ ಪಟ್ಟಿರುವುದು ಖಾತ್ರಿ ಆಗಿದೆ. ನಂತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಲೋಕಾಪೂರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಉಪಚುನಾವಣೆ ಹೊತ್ತಲ್ಲೇ ಬಾಗಲಕೋಟೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

Spread the loveಬಾಗಲಕೋಟೆ: ಉಪಚುನಾವಣೆ  ಹೊತ್ತಲ್ಲೇ ಬಾಗಲಕೋಟೆ  ಬಿಜೆಪಿಯಲ್ಲಿ  ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಪಕ್ಷದ ಸಹ ವಕ್ತಾರ ಸ್ಥಾನಕ್ಕೆ ಪ್ರಸನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ