Breaking News

ಗ್​ ಬಾಸ್​ ಮನೆಗೆ ಎಂಎಲ್​ಎ ಪ್ರದೀಪ್​ ಈಶ್ವರ್​ ಎಂಟ್ರಿ

Spread the love

ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ದೊಡ್ಮನೆಗೆ ಅಚ್ಚರಿಯ ಎಂಟ್ರಿ ಕೊಟ್ಟಿದ್ದಾರೆ.

‘ಬಿಗ್​ ಬಾಸ್​’.. ಕನ್ನಡದ ಜನಪ್ರಿಯ ರಿಯಾಲಿಟಿ ಶೋನ 10ನೇ ಸೀಸನ್​ ಭಾನುವಾರದಿಂದ ಆರಂಭವಾಗಿದೆ. ಕಿಚ್ಚ ಸುದೀಪ್​ ಸಾರಥ್ಯದ 100 ದಿನಗಳ ಕಾರ್ಯಕ್ರಮವು ನಿನ್ನೆ ಗ್ರ್ಯಾಂಡ್​​ ಲಾಂಚ್​ ಆಗಿದೆ.

ಈ ವೇಳೆಯೇ ಕಲರ್​ಫುಲ್​ ಬಿಗ್​ ಬಾಸ್​ ಮನೆಗೆ ಸ್ಪರ್ಧಿಗಳು ಪ್ರವೇಶಿಸಿದ್ದಾರೆ. ಇದೀಗ ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ದೊಡ್ಮನೆಗೆ ಅಚ್ಚರಿಯ ಎಂಟ್ರಿ ಕೊಟ್ಟಿದ್ದಾರೆ. ಡೊಳ್ಳು ಕುಣಿತದ ಮೂಲಕ ಅವರನ್ನು ಬಿಗ್​ ಬಾಸ್​ ಮನೆಗೆ ಸ್ವಾಗತಿಸಲಾಗಿದೆ.

 

 

“ಕಲರ್​ಫುಲ್ ಮನೆಗೆ ತಾಳ್ಮೆಯ ಬಿಳುಪು; ಎಂಟ್ರೀ ಕೊಟ್ರು ಎಮ್.ಎಲ್.ಎ ಪ್ರದೀಪು!” ಎಂಬ ಶೀರ್ಷಿಕೆಯೊಂದಿಗೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಎಂಎಲ್​ಎ ಸಡನ್​ ಎಂಟ್ರಿ ಕಂಡು ದೊಡ್ಮನೆ ಸ್ಪರ್ಧಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. “ನಾನು ನಿನ್ನೆಯೇ ಬಿಗ್​ ಬಾಸ್​ ವೇದಿಕೆಗೆ ಬರಬೇಕಿತ್ತು. ಸ್ಪರ್ಧಿಯಾಗಿ ಜಾಯಿನ್​ ಆಗಿದ್ದಕ್ಕೆ ಬಹಳ ಸಂತೋಷವಾಯಿತು” ಎಂದು ಪ್ರದೀಪ್​ ಈಶ್ವರ್​ ಹೇಳಿದ್ದಾರೆ.

“ಅನಾಥ ಮಕ್ಕಳ ಏಳಿಗೆಗಾಗಿ ಶಾಸಕ ಪ್ರದೀಪ್​ ಈಶ್ವರ್​ ಬಿಗ್​ ಬಾಸ್​ ಮನೆಗೆ ಹೋಗಿದ್ದಾರೆ. ಬಿಗ್​ ಬಾಸ್​ನಿಂದ ಬಂದ ಹಣವನ್ನು ಅಪ್ಪ-ಅಮ್ಮ ಇಲ್ಲದ ಮಕ್ಕಳಿಗೆ ನೀಡಲು ಅವರು ನಿರ್ಧರಿಸಿದ್ದಾರೆ” ಎಂದು ಪ್ರದೀಪ್​ ಈಶ್ವರ್​ ಆಪ್ತರು ಮಾಹಿತಿ ನೀಡಿದ್ದಾರೆ. ಸದ್ಯ ಶಾಸಕರು ಬಿಗ್​ ಬಾಸ್​ಗೆ ಎಂಟ್ರಿ ಕೊಟ್ಟಿರುವುದು ಸೋಷಿಯಲ್​ ಮೀಡಿಯಾದಲ್ಲಿ ಬಿಸಿ ಬಿಸಿ ಚರ್ಚೆಗೆ ಎಡೆಮಾಡಿಕೊಟ್ಟಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ