Breaking News

ನನ್ನನ್ನು ಜೈಲಿಗೆ ಹಾಕಲಿ,ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ:

Spread the love

ಹಾಸನ: ನನ್ನನ್ನು ಜೈಲಿಗೆ ಹಾಕಲಿ, ನಾನು ಹೋರಾಟ ಮಾಡುತ್ತೇನೆ. ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ ಎಂದು ರೇವಣ್ಣ ಅವರು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ. ಪ್ರತೀ ಯೂನಿಟ್‍ಗೆ 40 ಪೈಸೆ ಅಂದರೆ ಎಷ್ಟು ಹಣವಾಗುತ್ತೆ ಹೇಳಿ. ರಾಜ್ಯದಲ್ಲಿ ರಾಜಕೀಯ ದ್ವೇಷ ಹೆಚ್ಚಾಗಿದೆ ರಾಜಕೀಯ ದುರುದ್ದೇಶ ಹೆಚ್ಚಾಗಿದೆ. ಇದು ಬಿಜೆಪಿಗೇ ತಿರುಗುಬಾಣವಾಗಲಿದೆ. ವಿಪಕ್ಷಗಳನ್ನ ಹತ್ತಿಕ್ಕಲು ದುರುದ್ದೇಶದಿಂದ ನಾಲ್ಕು ವರ್ಷದ ಹಿಂದಿನ ಕೇಸ್ ನ್ನು ಮತ್ತೆ ರೀಓಪನ್ ಮಾಡಿದ್ದಾರೆ. ತನಿಖಾ ಸಂಸ್ಥೆಗಳನ್ನ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ನೀರಾವರಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ಬೇಕಾಗುತ್ತದೆ. ನನ್ನನ್ನ ಜೈಲಿಗೆ ಹಾಕಲಿ ನಾನು ಹೋರಾಟ ಮಾಡುತ್ತೇನೆ ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದರು.

ರಾಜ್ಯದ ಐದು ಕೆಇಬಿ ಕಂಪನಿಗಳಿಂದ 7996 ಕೋಟಿ ನಷ್ಟವಿದೆ ಎಂದು ಕೆಆರ್ ಸಿ ಕಂಪನಿಗಳು ಅರ್ಜಿ ಹಾಕಿದ್ದಾರೆ. ಈ ಕಂಪನಿಗಳು ಈ ಹಣ ಭರಿಸುವಂತೆ ಸರ್ಕಾರಕ್ಕೆ ಅರ್ಜಿ ಹಾಕಿದ್ದಾರೆ. ಈ ನಷ್ಟ ಸರಿದೂಗಿಸಲು ನಮ್ಮ ರೈತರನ್ನ ಸಂಕಷ್ಟಕ್ಕೆ ತಂದೊಡ್ಡಿದೆ. ಪ್ರತೀ ಯೂನಿಟ್ ಗೆ 40 ಪೈಸೆ ಹೆಚ್ಚು ಮಾಡಿದ್ದಾರೆ. ರಾಜ್ಯದ ಇಂಧನ ಇಲಾಖೆಯಲ್ಲಿ ಇದೊಂದು ದುರದೃಷ್ಟಕರ. ಜನ ಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ ಎಂದು ಕಿಡಿಕಾರಿದರು.

ನಾನು ಇಂಧನ ಸಚಿವನಾಗಿದ್ದಾಗ ಬೆಸ್ಕಾಂನಲ್ಲಿ 600 ಕೋಟಿ ಹಣ ಎಫ್ ಡಿ ಇಟ್ಟಿದ್ದೆ. ರೈತರಿಗೆ ಒಂದೊಂದು ವಿದ್ಯುತ್ ಟಿಸಿ ಹಾಕಲು 18 ಸಾವಿರ ಜೊತೆಗೆ ಲಂಚ ಸೇರಿ 40 ಸಾವಿರ ಹಣ ತಗೊಳ್ತಿದ್ದಾರೆ. ಕೆಇಬಿ ಕಂಟ್ರಾಕ್ಟರ್ ಗಳ ಬಾಕಿ ಬಿಲ್ ಎರಡರಿಂದ ಮೂರು ಸಾವಿರ ಬಾಕಿ ಇದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು


Spread the love

About Laxminews 24x7

Check Also

ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ

Spread the loveಹಾಸನ: ಮುಂಬರುವ ದಿನಮಾನಗಳಲ್ಲಿ ಕರ್ನಾಟಕ ಮಾತ್ರವಲ್ಲದೇ ದೇಶದ ರಾಜಕೀಯದಲ್ಲಿಯೇ ದೊಡ್ಡ ಪರಿವರ್ತನೆಗಳು ನಡೆಯಲಿದ್ದು, ಹಾಸನ  ಜಿಲ್ಲೆಯೇ ಮತ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ