Breaking News

ಶಾಹು ನಗರ ವಂದನ ಕೊಲೊನಿಯಲ್ಲಿ ಎಲ್ಲಿ ನೋಡಿದರಲ್ಲಿ ಗಬ್ಬೆದ್ದು ನಾರುತ್ತಿರುವ ಕೊಳಚೆಗಳು ರಸ್ತೆ ಪಕ್ಕದ ಮೇಲೆ ಪ್ಲಾಸ್ಟಿಕ್ ತ್ಯಾಜ್ಯಗಳು

Spread the love

ಬೆಳಗಾವಿಯನ್ನು ಎರಡನೇ ರಾಜಧಾನಿ ಸ್ಮಾರ್ಟ ಸಿಟಿ ಕುಂದಾನಗರಿ ಹಂಗೆ ಹಿಂಗೇ ಅಂತಾ ವರ್ಣಿಸುತ್ತಾರೆ ಆದರೆ ನಗರದಲ್ಲಿ ಕೆಲವೊಂದಿಷ್ಟು ಬೇಜವಾಬ್ದಾರಿ ಇಲಾಖೆ ಬೇಜವಾಬ್ದಾರಿ ಅಧಿಕಾರಿಗಳು ಬೆಳಗಾವಿಯನ್ನು ಸ್ವಚ್ಛವಾಗಿಡಲು ಸಹಕರಿಸುತ್ತಿಲ್ಲ

ಬೆಳಗಾವಿ ಎಲ್ಲಾ ರಂಗದಲ್ಲೂ ತನ್ನ ಪ್ರಾಮುಖ್ಯತೆಯನ್ನು ಪಡೆದಿದೆ ವೀರ ರಾಣಿ ಕಿತ್ತೂರು ಚನ್ನಮ್ಮಾ ಸಂಗೊಳ್ಳಿ ರಾಯಣ್ಣ ರಂತಹ ದೇಶಭಕ್ತರ ಹುಟ್ಟಿದ ನಾಡಿದು ಬೆಳಗಾವಿ ರಾಜಕಾರಣ ಇಡೀ ರಾಜ್ಯಕ್ಕೆ ಒಂತರಾ ಡಿಫರೆಂಟ್ ಸರ್ಕಾರವನ್ನು ಕಟ್ಟುವುದರ ಜೊತೆಗೆ ಕೆಡುವುದರಲ್ಲಿ ನೈಪುಣ್ಯ ಹೊಂದಿದೆ ಎರಡೆರೆಡು ಸಚಿವರನ್ನು ಹೊಂದಿದ ಬೆಳಗಾವಿ

ಆದರೆ ಶಾಹು ನಗರ ವಂದನ ಕೊಲೊನಿಯಲ್ಲಿ ಎಲ್ಲಿ ನೋಡಿದರಲ್ಲಿ ಗಬ್ಬೆದ್ದು ನಾರುತ್ತಿರುವ ಕೊಳಚೆಗಳು ರಸ್ತೆ ಪಕ್ಕದ ಮೇಲೆ ಪ್ಲಾಸ್ಟಿಕ್ ತ್ಯಾಜ್ಯಗಳು ಇದನ್ನು ನೋಡಿದ್ರೆ ಮಹಾನಗರ ಪಾಲಿಕೆ ಕಾರ್ಮಿಕರು ಮೇಲಾಧಿಕಾರಿಗಳು ನಿದ್ರೆಗೆ ಜಾರಿದಂತಿದೆ

ಕೂಡಲೇ ಶಾಹು ನಗರ ಹಾಗು ವಂದನ ಕೊಲೊನಿಯಲ್ಲಿ ಮಹಾನಗರ ಪಾಲಿಕೆಯವರು ಸ್ವಚ್ಛತೆ ಗೊಳಿಸುವಂತೆ ಮತ್ತೆ ಮೇಲಾಧಿಕಾರಿಗಳು ಕಾರ್ಮಿಕರಿಗೆ ನಗರವನ್ನು ಸ್ವಚ್ಛವಾಗಿಡುವಂತೆ ತಾಕೀತ್ ಮಾಡಲು ಸ್ಥಳೀಯರು ಆಗ್ರಹಿಸಿದ್ದಾರೆ
ಅದೇ ರೀತಿ ಮನೆಯಲ್ಲಿರುವ ಕಸವನ್ನು ಸ್ಥಳೀಯರು ಪಾಲಿಕೆ ಕಸದ ವಾಹನಕ್ಕೆ ನೀಡಿ ಸ್ವಚ್ಚ ಬೆಳಗಾವಿಗೆ ಕೈ ಜೋಡಿಸಬೇಕೆಂಬುದೇ ಇನ್ ನ್ಯೂಸ್ ಆಶಯವಾಗಿದೆ


Spread the love

About Laxminews 24x7

Check Also

ನೂರಾರು ನವಜಾತ ಶಿಶುಗಳ ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆ

Spread the loveಮಂಗಳೂರು: ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಯಲ್ಲಿ, ತಾಯಿಯ ಮಮತೆಯಷ್ಟೇ ಪವಿತ್ರವಾದೊಂದು ಕ್ರಾಂತಿಕಾರಿ ಯೋಜನೆ ನಿಶ್ಯಬ್ದವಾಗಿ ನಡೆಯುತ್ತಿದೆ. ‘ಅಮೃತ ಘಟಕ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ