Breaking News

ಕಿತ್ತೂರು ಚೆನ್ನಮ್ಮ, ಟಿಪ್ಪು ಸುಲ್ತಾನ್​ ಸ್ವಾಭಿಮಾನದ ಹೋರಾಟ ನಮ್ಮೆಲ್ಲರಿಗೆ ಸ್ಫೂರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬೆಂಗಳೂರು : ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು ಸುಲ್ತಾನ್​​ ಸ್ವಾಭಿಮಾನಿ ಹೋರಾಟದ ಸ್ಫೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಕಿತ್ತೂರು ರಾಣಿ ಚೆನ್ನಮ್ಮನ ಉತ್ಸವ-2023ರನ್ನು ಆಯೋಜಿಸಿದ್ದು, ಪೂರ್ವಭಾವಿಯಾಗಿ ಕಿತ್ತೂರು ಚೆನ್ನಮ್ಮಾಜಿಯ ವೀರ ವಿಜಯ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಚೆನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಿತ್ತೂರು ಚೆನ್ನಮ್ಮ ತನ್ನ ಸಣ್ಣ ಸೈನ್ಯದಿಂದ ಬ್ರಿಟಿಷರ ಬೃಹತ್ ಸೈನ್ಯಕ್ಕೆ ಸೆಡ್ಡು ಹೊಡೆದ ಧೀಮಂತ ರಾಣಿ. ಇವರ ಧೈರ್ಯ ಮತ್ತು ಆದರ್ಶ ಯುವ ಸಮೂಹವನ್ನು, ಇವತ್ತಿನ ಪೀಳಿಗೆಯನ್ನು ತಲುಪಬೇಕು ಎನ್ನುವ ಕಾರಣಕ್ಕೆ ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಮತ್ತು ಜಯಂತ್ಯುತ್ಸವವನ್ನು ಆರಂಭಿಸಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿ, ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ್, ಧಾರವಾಡ ಗ್ರಾಮೀಣ ಶಾಸಕರಾದ ವಿನಯ್ ಕುಲಕರ್ಣಿ, ಬೈಲಹೊಂಗಲ ಶಾಸಕರಾದ ಮಹಂತೇಶ ಕೌಜಲಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಕುರಿತು ವೀರ ಚೆನ್ನಮ್ಮನ ಕುರಿತು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಕೂಡ ಹಾಕಿಕೊಂಡಿದ್ದಾರೆ.

ನಿಮಗೆಲ್ಲ ತಿಳಿದಿರುವಂತೆ ಕಳೆದ 25 ವರ್ಷಗಳಿಂದ ಉತ್ಸವವನ್ನು ಆಚರಿಸಲಾಗುತ್ತಿದ್ದು, ಈ ಬಾರಿ ಅಕ್ಬೋಬರ್‌ 23ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಕಿತ್ತೂರು ಉತ್ಸವವನ್ನು ಆಚರಿಸಲಾಗುವುದು. ಉತ್ಸವಕ್ಕೆ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದೆ. ಇನ್ನೂ ಮೊನ್ನೆ ತಾನೇ ಕಿತ್ತೂರು ಉತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಬೆಳಗಾವಿಯಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಅಕ್ಟೋಬರ್​ 4 ರಂದು ನಡೆಸಲಾಗಿತ್ತು.

ಆ ವೇಳೆ ಜಾರಕಿಹೊಳಿ ಮೂರು ದಿನಗಳ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕನಿಷ್ಠ ಮೂರು ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ. ಇದಕ್ಕಾಗಿ ಪ್ರಯತ್ನಿಸಲಾಗುವುದು. ಈಗಾಗಲೇ ಐದು ಕೋಟಿ ರೂಪಾಯಿ ನೀಡುವಂತೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದರು. ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ವೀರ ಹೋರಾಟಗಾರರ ಭಾವಚಿತ್ರಗಳ ಅನಾವರಣ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ