Breaking News

ಪಾಕಿಸ್ತಾನ ಜೊತೆ ಆಡುವುದೇ ಒಂದು ವಿಶೇಷ’.. ಭಾರತ ಪಾಕಿಸ್ತಾನ ಕದನಕ್ಕೂ ಮುನ್ನ ಅಭಿಪ್ರಾಯ ಹಂಚಿಕೊಂಡ ರಾಹುಲ್​, ಕೊಹ್ಲಿ, ಪಾಂಡ್ಯ

Spread the love

ಪಾಕಿಸ್ತಾನ ಜೊತೆ ಆಡುವುದೇ ಒಂದು ವಿಶೇಷ ಎಂದು ಭಾರತದ ರನ್​ ಮಷಿನ್​ ವಿರಾಟ್​ ಕೊಹ್ಲಿ ಹೇಳಿದ್ದಾರೆ. ಇದರೊಂದಿಗೆ ಆಲ್​ರೌಂಡರ್​ ಆಟಗಾರ ಹಾರ್ದಿಕ್​ ಪಾಂಡ್ಯ ಮತ್ತು ಕೋಚ್​ ರಾಹುಲ್​ ದ್ರಾವಿಡ್​ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಅಹಮದಾಬಾದ್, ಗುಜರಾತ್: ಶನಿವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಏಕದಿನ ವಿಶ್ವಕಪ್ 2023 ರ ಬಹು ನಿರೀಕ್ಷಿತ ಪಂದ್ಯಕ್ಕೆ ಮುನ್ನ, ಮೆನ್ ಇನ್ ಬ್ಲೂ ವೈಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ರನ್​ ಮಷಿನ್​ ವಿರಾಟ್​ ಕೊಹ್ಲಿ ಮತ್ತು ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

 

ಪಾಕ್​ ಜೊತೆ ಆಡುವುದೇ ವಿಶೇಷ: ಐಸಿಸಿ ವಿಡಿಯೋವೊಂದರಲ್ಲಿ ಮಾತನಾಡುತ್ತಿದ್ದ ವಿರಾಟ್ ಕೊಹ್ಲಿ, ಮೆಲ್ಬೋರ್ನ್‌ನಲ್ಲಿ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದ ಬಗ್ಗೆ ಮಾತನಾಡಿದರು. ಇಂತಹ ಪಂದ್ಯಗಳು ಯಾವತ್ತೂ ವಿಶೇಷ ಅನಿಸುತ್ತದೆ. ಮೆಲ್ಬರ್ನ್‌ನ ಹೋಟೆಲ್‌, ಸ್ಟೇಡಿಯಂ ಹೊರಗಡೆ ಅಭಿಮಾನಿಗಳ ಸದ್ದು ನಿಜಕ್ಕೂ ಅದ್ಭುತವಾಗಿತ್ತು. ಮೈದಾನಕ್ಕೆ ಕಾಲಿಟ್ಟ ಕ್ಷಣದಲ್ಲೂ ಕ್ರೀಡಾಂಗಣದಲ್ಲೂ ಒಂದು ರೀತಿಯ ಶಕ್ತಿಯ ಭಾಸವಾಯಿತು ಎಂದು ಕೊಹ್ಲಿ ಐಸಿಸಿ ಹಂಚಿಕೊಂಡಿರುವ ವಿಡಿಯೋದಲ್ಲಿ ವಿವರಿಸಿದ್ದಾರೆ.

ನನಗೆ ಕಾಯಲು ಸಾಧ್ಯವಾಗುತ್ತಿಲ್ಲ: ಇಂದು ಅತ್ಯಂತ ರೋಚಕ ಸಮಯವಾಗಲಿದೆ. 110,000ಕ್ಕೂ ಅಧಿಕ ಅಭಿಮಾನಿಗಳ ಮುಂದೆ ಆಡುವುದನ್ನು ಎದುರು ನೋಡುತ್ತಿದ್ದೇನೆ. ಖಂಡಿತವಾಗಿಯೂ ತುಂಬಾ ಉತ್ಸುಕನಾಗಿದ್ದೇನೆ. ಈ ಪಂದ್ಯಕ್ಕಾಗಿ ಕಾಯಲು ನನಗೆ ಸಾಧ್ಯವಾಗುತ್ತಿಲ್ಲ. ಇದು ತುಂಬಾ ರೋಮಾಂಚನಕಾರಿ ಸಮಯವಾಗಲಿದೆ ಎಂದು ಮೆನ್ ಇನ್ ಬ್ಲೂ ವೈಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ.

ಈ ಅನುಭವ ಅದ್ಭುತವಾಗಿದೆ: ಭಾರತ – ಪಾಕ್ ನಡುವಣ ಪಂದ್ಯವನ್ನು ಆನಂದಿಸುವುದೇ ಒಂದು ಅದ್ಭುತ ಅನುಭವ. ಭಾರತದಲ್ಲಿ ನಡೆಯಲಿರುವ ಭಾರತ – ಪಾಕಿಸ್ತಾನ ಪಂದ್ಯದ ವಾತಾವರಣ ಅದ್ಭುತವಾಗಿದೆ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ವಿಶ್ವಕಪ್​ ಟೂರ್ನಮೆಂಟ್​ನ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನವನ್ನು ಸೋಲಿಸಿದ ನಂತರ ಭಾರತ ಅಹಮದಾಬಾದ್​ಗೆ ಕಾಲಿಟ್ಟಿದ್ದು, ಆತ್ಮವಿಶ್ವಾಸದಿಂದಲೇ ಇದೆ. ವಿಜೃಂಭಿಸಲಿದೆ.

ಏಷ್ಯಾ ಕಪ್ 2023 ರ ಸೂಪರ್ ಫೋರ್ ಪಂದ್ಯದಲ್ಲಿ ಭಾರತವು ಕೊನೆಯ ಬಾರಿ ಪಾಕಿಸ್ತಾನವನ್ನು ಎದುರಿಸಿತ್ತು, ಇದರಲ್ಲಿ ರೋಹಿತ್ ಶರ್ಮಾ ಅವರ ಬಳಗ ಆಜಂ ತಂಡದ ವಿರುದ್ಧ 228 ರನ್‌ಗಳ ಜಯ ಸಾಧಿಸಿತು. ODI ವರ್ಲ್ಡ್ಸ್ ಕಪ್‌ನಲ್ಲಿ ಎರಡು ಪಂದ್ಯಗಳನ್ನು ಆಡಿದ ನಂತರ, ಭಾರತವು ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇಂದು ಗುಜರಾತ್​ನ ಅಹಮದಾಬಾದ್​ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭಗೊಳ್ಳಲಿದ್ದು, 1.30ಕ್ಕೆ ಟಾಸ್​ ನಡೆಯಲಿ


Spread the love

About Laxminews 24x7

Check Also

ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್…

Spread the love ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್… ಕಸ ವಿಲೇವಾರಿಯಾಗುತ್ತಿಲ್ಲ, ನಾಯಿಗಳ ಹಾವಳಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ