Breaking News

ಭಾರತ – ಪಾಕಿಸ್ತಾ‌ನ ಪಂದ್ಯ: ಭಾರತದ ಗೆಲುವಿಗೆ ಕ್ರಿಕೆಟ್​ ಅಭಿಮಾನಿಗಳಿಂದ ವಿಶೇಷ ಪೂಜೆ

Spread the love

ಬೆಳಗಾವಿ : ಭಾರತ ಮತ್ತು ಪಾಕಿಸ್ತಾನ ನಡುವಣ ವಿಶ್ವಕಪ್​ ಪಂದ್ಯದಲ್ಲಿ ಭಾರತ ತಂಡವು ದಿಗ್ವಿಜಯ ಸಾಧಿಸಲಿ ಎಂದು ಬೆಳಗಾವಿಯಲ್ಲಿ ಕ್ರಿಕೆಟ್ ಅಭಿಮಾನಿಗಳು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಗರದ ರಾಣಿ ಚನ್ನಮ್ಮ ವೃತ್ತದ ಬಳಿ ಇರುವ ಗಣಪತಿ ಮಂದಿರದಲ್ಲಿ ಕ್ರಿಕೆಟ್​ ಪ್ರೇಮಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಕಳೆದ 31 ವರ್ಷಗಳಲ್ಲಿ ನಡೆದ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ- ಪಾಕಿಸ್ತಾನ ಏಳು ಬಾರಿ ಮುಖಾಮುಖಿಯಾಗಿದೆ. ಏಳು ಪಂದ್ಯಗಳಲ್ಲೂ ಭಾರತವೇ ಗೆಲುವು ಸಾಧಿಸಿದೆ. ಹಾಗಾಗಿ, 8ನೇ ಬಾರಿಯೂ ಭಾರತ ತಂಡ ಗೆಲ್ಲಲಿ ಎಂದು ಬೇಡಿಕೊಂಡರು.

ಈ ವೇಳೆ ಮಾತನಾಡಿದ ಕ್ರೀಡಾ ಅಭಿಮಾನಿ ಮಹಾಂತೇಶ ವಕ್ಕುಂದ, 2023ರ ವಿಶ್ವಕಪ್ ಟೂರ್ನಿಯ ರೋಚಕ ಪಂದ್ಯ ಇದಾಗಿದೆ. ಗುಜರಾತ್​ನ ನರೇಂದ್ರ ಮೋದಿ ಕ್ರೀಡಾಂಗಣ ಭಾರತ ಮತ್ತು ಪಾಕಿಸ್ತಾನ ನಡುವಿನ ಐತಿಹಾಸಿಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಇಡೀ ದೇಶವೇ ಪಂದ್ಯ ವೀಕ್ಷಿಸಲು ತುದಿಗಾಲಲ್ಲಿ ನಿಂತಿದೆ. ಈ ಹಿಂದಿನ ವಿಶ್ವಕಪ್​ಗಳಲ್ಲಿ ​ಪಾಕಿಸ್ತಾನ ವಿರುದ್ಧ ಭಾರತ ಸೋತ ಇತಿಹಾಸ ಇಲ್ಲ. ಹಾಗಾಗಿ, ಈ ಬಾರಿಯೂ ಭಾರತ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ವಿಶ್ವಕಪ್ ಗೆಲ್ಲುತ್ತದೆ ಇಲ್ಲವೋ ಅದು ಬೇರೆ ವಿಚಾರ ಆದರೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಾತ್ರ ನಮ್ಮ ಭಾರತ ತಂಡ ಗೆಲ್ಲಬೇಕು ಎಂದು ಎಂದು ಹೇಳಿದರು.

ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್​ ಪಂದ್ಯ ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಸಂಬಂಧ ಬೆಳಗಾವಿಯಲ್ಲಿ ಅಭಿಮಾನಿಗಳು ಭಾರತದ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ