Home / Uncategorized / ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.ಕೋರಿಕೆ

ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.ಕೋರಿಕೆ

Spread the love

ಸನ್ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ, ವಿಧಾನಸೌಧ ಬೆಂಗಳೂರು.

ವಿಷಯ- ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.

 

ನಮ್ಮ ಬೇಡಿಕೆ

ಕಿತ್ತೂರು ಉತ್ಸವಕ್ಕೆ ಐದು ಕೋಟಿ,ಬೆಳಗಾವಿ ರಾಜ್ಯೋತ್ಸವಕ್ಕೆ ಎರಡು ಕೋಟಿ ಅನುದಾನ ನೀಡುವ ಕೋರಿಕೆ

ಸನ್ಮಾನ್ಯರೇ.

ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವವನ್ನು ಬಿಂಬಿಸುವ ಕಿತ್ತೂರು ಉತ್ಸವಕ್ಕೆ ಐದು ಕೋಟಿ ರೂ ಅನುದಾನ, ಹಾಗೂ ಬೆಳಗಾವಿ ನಗರದಲ್ಲಿ ನಡೆಯುವ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ರಾಜ್ಯ ಸರ್ಕಾರ ತಕ್ಷಣ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚನ್ನಮ್ಮನ ಕಿತ್ತೂರಿನಿಂದ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ತಮಗೆ ಮನವಿ ಅರ್ಪಿಸುತ್ತಿದ್ದೇವೆ.

 

ಸನ್ಮಾನ್ಯ ಮುಖ್ಯಮಂತ್ರಿಗಳೇ ಸರ್ಕಾರದ ನಡುವಳಿಕೆಯಿಂದ ಪ್ರತಿ ವರ್ಷ ಉತ್ತರ ಕರ್ನಾಟಕದ ಜನ ರಾಜ್ಯೋತ್ಸವ ಮತ್ತು ಕಿತ್ತೂರು ಉತ್ಸವಕ್ಕಾಗಿ ಹೋರಾಟ ಮಾಡಲೇಬೇಕಾಗುತ್ತದೆ.ಸರ್ಕಾರ ಸಕಾಲದಲ್ಲಿ ಅನುದಾನ ಬಿಡುಗಡೆ ಮಾಡದೇ ಇರುವದರಿಂದ ಉತ್ಸವಗಳ ಸಿದ್ಧತೆ ಮಾಡಲು ಬೆಳಗಾವಿ ಜಿಲ್ಲಾಡಳಿತ ಪ್ರತಿ ವರ್ಷವೂ ವೇದನೆ ಅನುಭವಿಸುತ್ತಲೇ ಬಂದಿದೆ.

 

ಸರ್ಕಾರ ಕಿತ್ತೂರು ಉತ್ಸವದ ಎರಡು ಅಥವಾ ಮೂರು ದಿನ ಮೊದಲು ಅನುದಾನ ಬಿಡುಗಡೆ ಮಾಡುತ್ತದೆ.ಇಷ್ಟೊಂದು ವಿಳಂಬವಾಗಿ,ಅಲ್ಪ ಪ್ರಮಾಣದ ಅನುದಾನವನ್ನು ಬೆಳಗಾವಿ ಜಿಲ್ಲೆಯ ಜನ ಹೋರಾಟ,ಕೂಗಾಟ,ಚೀರಾಟ ಮಾಡಿದ ಬಳಿಕವೇ ಕೊಡುತ್ತೀರಾ.ಇದು ಸರಿಯೇ ? ಮೈಸೂರು ದಸರಾ ಉತ್ಸವಕ್ಕೆ ಅನುದಾನ ಕೊಡಿ ಎಂದು ಅಲ್ಲಿಯ ಜನ ಎಂದಿಗೂ ಹೋರಾಟ ಮಾಡಿದ್ದನ್ನು ನಾವು ಕೇಳಿಲ್ಲ.ನೋಡಿಲ್ಲ.ಅಲ್ಲಿಯ ಜನ ಹೋರಾಟ ಮಾಡುವ ಮೊದಲೇ ಅನುದಾನ ಬಿಡುಗಡೆ ಮಾಡ್ತೀರಾ ? ಈ ತಾರತಮ್ಯ ದಿಂದ ನಾವು ನೊಂದಿದ್ದೇವೆ.ನಮ್ಮ ಸಹನೆಯ ಕಟ್ಟೆ ಒಡೆಯುವ ಹೊಸ್ತಿಲಲ್ಲಿದೆ.

 

ಕಿತ್ತೂರು ಉತ್ಸವಕ್ಕೆ ಐದು ಕೋಟಿ ರೂ, ಬೆಳಗಾವಿ ರಾಜ್ಯೋತ್ಸವಕ್ಕೆ ಎರಡು ಕೋಟಿ ರೂ ಅನುದಾನವನ್ನು ಪ್ರತಿ ವರ್ಷ ಅಗಸ್ಟ್ ತಿಂಗಳ ಮೊದಲ ವಾರದಲ್ಲೇ ಬಿಡುಗಡೆ ಮಾಡುವ ನಿರ್ಧಾರ ಬಜೆಟ್ ನಲ್ಲೇ ಪ್ರಕಟಿಸಬೇಕು, ಇದಕ್ಕಾಗಿ ವಿಶೇಷ ನಿಯಮಾವಳಿ ಜಾರಿ ಮಾಡಬೇಕು. ಯಾವುದೇ ಸರ್ಕಾರ ಬಂದರೂ ಈ ನಿಯಮ ಪಾಲನೆಯಾಗುವ ಕಾನೂನು ರಚಿಸಬೇಕು ಎಂದು ತಮ್ಮಲ್ಲಿ ಕಳಕಳಿಯ ಮನವಿ.

ಧನ್ಯವಾದಗಳೊಂದಿಗೆ

ದೀಪಕ ಬ ಗುಡಗನಟ್ಟಿ
ಜಿಲ್ಲಾಧ್ಯಕ್ಷರು ಕರವೇ ಬೆಳಗಾವಿ


Spread the love

About Laxminews 24x7

Check Also

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ