Breaking News
Home / ರಾಜಕೀಯ / ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಅದ್ಭುತ ಪ್ರೇಮಕಥೆ ವೀಕ್ಷಿಸಲು ಪ್ರೇಕ್ಷಕರ ಕಾತರ

ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಅದ್ಭುತ ಪ್ರೇಮಕಥೆ ವೀಕ್ಷಿಸಲು ಪ್ರೇಕ್ಷಕರ ಕಾತರ

Spread the love

ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆ ದಿನಾಂಕವನ್ನು ನಟ ರಕ್ಷಿತ್​ ಶೆಟ್ಟಿ ಬಹಿರಂಗಪಡಿಸಿದ್ದಾರೆ.

ರಕ್ಷಿತ್​​ ಶೆಟ್ಟಿ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ. ಏಳು ಬೀಳುಗಳನ್ನು ಎದುರಿಸಿ, ಪ್ರಸ್ತುತ ಸ್ಟಾರ್​ ನಟನಾಗಿ ಹೊರ ಹೊಮ್ಮಿದ್ದಾರೆ. ರಕ್ಷಿತ್​​ ಶೆಟ್ಟಿ ಮುಖ್ಯಭೂಮಿಕೆಯ ಬಹುತೇಕ ಸಿನಿಮಾಗಳು ಹಿಟ್ ಸಾಲಿಗೆ ಸೇರಿವೆ.

ಪ್ರತೀ ಸಿನಿಮಾಗಳು ಕೂಡ ಅದ್ಭುತ ಅಂತಾರೆ ಅಭಿಮಾನಿಗಳು. ಪ್ರತೀ ಪಾತ್ರಗಳಿಗೂ ಅಚ್ಚುಕಟ್ಟಾಗಿ ಜೀವ ತುಂಬೋ ಮುಖೇನ ಆ ಪಾತ್ರವನ್ನು, ಸಿನಿಮಾವನ್ನು ವಿಶೇಷವಾಗಿಸುತ್ತಾರೆ. ಕಥೆ ರವಾನಿಸುವ ಶೈಲಿಗೆ ಅಭಿಮಾನಿಗಳು ಮನಸೋಲುತ್ತಾರೆ. ಅದರಂತೆ, ಇತ್ತೀಚೆಗಷ್ಟೇ ಬಿಡುಡೆ ಆಗಿರುವ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾ ಸಿನಿಪ್ರಿಯನ್ನು, ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶ ಕಂಡಿವೆ..

 

 

ಮನು ಮತ್ತು ಪ್ರಿಯಾಳ ಪ್ರೇಮಕಥೆಯನ್ನು ಪ್ರೇಕ್ಷಕರೆದುರು ಅದ್ಭುತವಾಗಿ ಪ್ರದರ್ಶಿಸಿದ ಸಿನಿಮಾವೇ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’. SSESideA ಸಿನಿಮಾ ಸಿನಿಪ್ರಿಯರ ಮನ ಗೆಲ್ಲುವಲ್ಲಿ ಯಶ ಕಂಡಿದೆ. ಸಿನಿಮಾ ವೀಕ್ಷಿಸಿದವರು ಪ್ರೇಮ ಪ್ರಪಂಚಕ್ಕೆ ಭೇಟಿ ಕೊಟ್ಟು ಬಂದಿದ್ದಾರೆ. ಚಿತ್ರ ಭಾವನಾತ್ಮಕವಾಗಿ ಪ್ರೇಕ್ಷಕರ ಮನ ಮುಟ್ಟಿದೆ. ಕನ್ನಡದಲ್ಲಿ ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಸಿನಿಮಾ ತೆಲುಗಿಗೂ ಡಬ್​ ಆಗಿ ಹೊರ ರಾಜ್ಯದವರ ಮನ ಗೆದ್ದಿದೆ. ಹೇಮಂತ್​ ಎಂ ರಾವ್ ನಿರ್ದೇಶನದ ಸಿನಿಮಾದಲ್ಲಿ ಮನು ಮತ್ತು ಪ್ರಿಯಾ ಪಾತ್ರದಲ್ಲಿ ರಕ್ಷಿತ್​ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್​ ಕಾಣಿಸಿಕೊಂಡಿದ್ದು, ಸಿನಿಮಾ ಒಟಿಟಿಯಲ್ಲೂ ಲಭ್ಯವಿದೆ. ಇದೀಗ ಚಿತ್ರದ ಮತ್ತೊಂದು ಭಾಗ ಬಿಡುಗಡೆಗೆ ಸಜ್ಜಾಗುತ್ತಿದೆ.

‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆ ದಿನಾಂಕ: ರಕ್ಷಿತ್​ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಸಿನಿಮಾದ ಮತ್ತೊಂದು ವಿಶೇಷವೆಂದರೆ ಅತಿ ಕಡಿಮೆ ಅವಧಿಯಲ್ಲಿ ಚಿತ್ರದ ಮತ್ತೊಂದು ಭಾಗ ಬಿಡುಗಡೆ ಆಗುತ್ತಿರುವುದು. ಆದರೆ ಈಗಾಗಲೇ ಎರಡು ಬಾರಿ ರಿಲೀಸ್​ ಡೇಟ್​ನಲ್ಲಿ ಬದಲಾವಣೆ ಮಾಡಲಾಗಿದೆ. ಕಳೆದ ಸೆಪ್ಟೆಂಬರ್​ 1 ರಂದು ಪಾರ್ಟ್ 1 ಬಿಡುಗಡೆ ಆಗಿತ್ತು. ಅಕ್ಟೋಬರ್​ನಲ್ಲೇ ಸಿನಿಮಾ ರಿಲೀಸ್​ ಮಾಡಲು ನಿರ್ಧರಿಸಲಾಗಿತ್ತು. ಇದಕ್ಕೂ ಮುನ್ನ ಅಕ್ಟೋಬರ್​ 20 ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ರಿಲೀಸ್​ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿತ್ತು. ಬಳಿಕ ಅಕ್ಟೋಬರ್​ 27 ರಂದು ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಇದೀಗ ಸಿನಿಮಾವನ್ನು ಮತ್ತೊಮ್ಮೆ ಮುಂದೂಡಲಾಗಿದೆ. ನವೆಂಬರ್​ನಲ್ಲಿ ಪಾರ್ಟ್ ಬಿ ರಿಲಿಸ್​ ಆಗಲಿದೆ. ಅತೀ ಕಡಿಮೆ ಅವಧಿಯಲ್ಲಿ ಸೀಕ್ವೆಲ್​ ಬಿಡುಗಡೆ ಮಾಡುತ್ತಿರುವುದು ಬಹುಶಃ ಇದೇ ಮೊದಲು.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ