Breaking News

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 2.5 ಕೋಟಿ ವಂಚನೆ ಆರೋಪ: ಚೈತ್ರಾ ಮಾದರಿ ಮತ್ತೊಂದು ಕೇಸ್​ ಬೆಳಕಿಗೆ

Spread the love

ವಿಜಯನಗರ : ಕಳೆದ ಕೆಲವು ದಿನಗಳ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ವಂಚಿಸಿದ್ದ ಪ್ರಕರಣ ಸಂಬಂಧ ಚೈತ್ರಾ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.

ಇದರ ಬೆನ್ನಲ್ಲೇ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 2.5 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಮಾಜಿ ಮುಖಂಡ ಹಾಗೂ ಬಿಜೆಪಿಯ ಪ್ರಮುಖ ರಾಜ್ಯ ನಾಯಕರೊಬ್ಬರ ಆಪ್ತರ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ನಿವೃತ್ತ ಪಿಡ್ಲ್ಯೂಡಿ ಇಂಜಿನಿಯರ್‌ ಶಿವಮೂರ್ತಿ ವಂಚನೆಗೊಳಗಾದ ವ್ಯಕ್ತಿ.

”ಬಿಜೆಪಿ ಮಾಜಿ ಮುಖಂಡ ಹಾಗೂ ಪುತ್ತೂರು ಮೂಲದ​ ವ್ಯಕ್ತಿಯೊಬ್ಬರು 2.5 ಕೋಟಿ ರೂ ಪಡೆದು ವಂಚನೆ ಮಾಡಿದ್ದಾರೆ. ಇದೀಗ ಹಣ ವಾಪಸ್‌ ಕೊಡುವಂತೆ ಕೇಳಿದ್ದಕ್ಕೆ ವಂಚಕರು ಬೆದರಿಕೆ ಹಾಕುತ್ತಿದ್ದಾರೆ” ಎಂದು ಶಿವಮೂರ್ತಿ ಆರೋಪಿಸಿದ್ದಾರೆ. ಇದರಿಂದ ಬೇಸತ್ತು ಶಿವಮೂರ್ತಿ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಿಲ್ಲೆಯ ಹಗರಿಬೊಮ್ಮನಹಳ್ಳಿ ಎಸ್‌.ಸಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಕೆಆರ್‌ಪಿಪಿ ಜಿಲ್ಲಾಧ್ಯಕ್ಷ, ಕೊಟ್ಟೂರಿನ ಆಫ್ಟಿಕಲ್‌ ವೊಂದರ ಮಾಲೀಕ, ಪುತ್ತೂರು ಮೂಲದ ವ್ಯಕ್ತಿ ಹಣ ಪಡೆದು ವಂಚಿಸಿದ್ದಾರೆ ಎಂದು ಶಿವಮೂರ್ತಿ ಹೇಳಿದ್ದಾರೆ.

ಚುನಾವಣೆಗೂ ಮುನ್ನ ಈ ವಂಚಕರ ತಂಡ ಬಿಜೆಪಿ ಟಿಕೆಟ್‌ ಸಿಗಬೇಕು ಎಂದರೆ ಕೋಟಿಗಟ್ಟಲೇ ಹಣ ನೀಡಬೇಕು ಎಂದು ಹೇಳಿದೆ. ಬಳಿಕ ಶಿವಮೂರ್ತಿ ಅವರಿಂದ ಹಂತ ಹಂತವಾಗಿ ಬರೋಬ್ಬರಿ 2.5 ಕೋಟಿ ಹಣವನ್ನು ಪಡೆದಿದೆ. ಇದರಲ್ಲಿ ಪುತ್ತೂರು ಮೂಲದ ವ್ಯಕ್ತಿ 90 ಲಕ್ಷ ಪಡೆದಿದ್ದು, ಬಿಜೆಪಿ ಮುಖಂಡ ಮತ್ತು ಸಂಗಡಿಗರು ಒಂದು ಕೋಟಿ ರೂ ಪಡೆದಿದ್ದಾರೆ ಎಂದು ಶಿವಮೂರ್ತಿ ದೂರಿದ್ದಾರೆ.

ಬಳಿಕ ಹಗರಿಬೊಮ್ಮನಹಳ್ಳಿ ಬಿಜೆಪಿ ಟಿಕೆಟ್‌‌ ಬಲ್ಲಾಹುಣ್ಸಿ ರಾಮಣ್ಣಗೆ ಘೋಷಣೆ ಆಗಿತ್ತು. ಇದರಿಂದ ಮೋಸ ಹೋಗಿರುವ ಬಗ್ಗೆ ತಿಳಿದ ಶಿವಮೂರ್ತಿ ಕೊಟ್ಟ ಹಣ ವಾಪಸ್‌ ನೀಡುವಂತೆ ಕೇಳಿದ್ದಾರೆ. ಆಗ ಬಿಜೆಪಿ ಮಾಜಿ ಮುಖಂಡ ಹಾಗೂ ಅವರ ಗ್ಯಾಂಗ್‌ ಶಿವಮೂರ್ತಿ ಅವರಿಗೆ ಬೆದರಿಕೆ ಹಾಕಿದೆ. ಪುತ್ತೂರು ಮೂಲದ ವ್ಯಕ್ತಿ 50 ಲಕ್ಷದ ಒಂದು ಚೆಕ್‌, 22 ಲಕ್ಷದ ಒಂದು ಚೆಕ್‌ನ್ನು ಕೊಟ್ಟಿದ್ದ. ಈ ಚೆಕ್​ನ್ನು ಬ್ಯಾಂಕ್‌ನಲ್ಲಿ ಕೊಟ್ಟಾಗ ಎರಡು ಬಾರಿ ಚೆಕ್‌ಗಳು ಬೌನ್ಸ್‌ ಆಗಿದೆ. ಬಳಿಕ ವಂಚನೆ ಸಂಬಂಧ ಕೊಟ್ಟೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ