Breaking News

ಪೊಲೀಸ್ ಸಿಬ್ಬಂದಿಗೆ ಪೂರೈಸಿದ್ದ ಆಹಾರದಲ್ಲಿ ಹುಳು

Spread the love

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್‌ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪಂದ್ಯದ ಸಂದರ್ಭದಲ್ಲಿ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದಕ್ಕೆ ವಹಿಸಿತ್ತು.

ಈ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿರುವ ಶಾರದಾ ಕೇಟರರರ್ಸ್​ಗೆ ಊಟ ಸರಬರಾಜು ವಹಿಸಲಾಗಿತ್ತು. ಆದರೆ, ಮಧ್ಯಾಹ್ನ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿದ್ದು, ಸಿಬ್ಬಂದಿಗಳ ವಾಟ್ಸ್​​ಆಯಪ್​ ಗ್ರೂಪ್‌ನಲ್ಲಿ ಫೋಟೋ ಹರಿದಾಡುತ್ತಿದೆ. ಈ ಸಂಬಂಧ ಶುಚಿತ್ವ ಕಾಪಾಡದ ಕೇಟರರ್ಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ