Breaking News

ಹುಲಿವೇಷ ಕುಣಿತ ಸ್ಪರ್ಧೆಗೆ ತಾರಾ ಮೆರುಗು: ಕ್ರಿಕೆಟಿಗ ಹರ್ಭಜನ್​ ಸಿಂಗ್​, ನಟ ಸುನೀಲ್​ ಶೆಟ್ಟಿ ಭಾಗಿ

Spread the love

ಮಂಗಳೂರು (ದಕ್ಷಿಣ ಕನ್ನಡ): ನಗರದ ಉರ್ವಾ ಮೈದಾನದಲ್ಲಿ ನಡೆದ ಹುಲಿವೇಷ ಸ್ಪರ್ಧೆ ಪಿಲಿನಲಿಕೆಯಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಭಾಗಿಯಾದರು.

ಮಂಗಳೂರು (ದಕ್ಷಿಣ ಕನ್ನಡ): ನಗರದ ಉರ್ವಾ ಮೈದಾನದಲ್ಲಿ ನಡೆದ ಹುಲಿವೇಷ ಸ್ಪರ್ಧೆ ಪಿಲಿನಲಿಕೆಯಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಭಾಗಿಯಾದರು. ಕಾಂಗ್ರೆಸ್ ಮುಖಂಡ ಮಿಥುನ್​ ರೈ ನೇತೃತ್ವದಲ್ಲಿ ಪಿಲಿನಲಿಕೆ ಎಂಬ ಹುಲಿವೇಷ ಸ್ಪರ್ಧೆ ನಡೆಯಿತು.

ನಿನ್ನೆ ರಾತ್ರಿ ಹರ್ಭಜನ್​ ಸಿಂಗ್​ ಹಾಗೂ ಸುನೀಲ್​ ಶೆಟ್ಟಿ ಪಿಲಿನಲಿಕೆಯ ರಂಗನ್ನು ಮತ್ತಷ್ಟು ಹೆಚ್ಚಿಸಿದರು. ಹುಲಿವೇಷ ಕುಣಿತ ಕಂಡು ಖುಷಿಪಟ್ಟ ಹರ್ಭಜನ್​ ಸಿಂಗ್​ ಪಿಲಿನಲಿಕೆಯ ದೃಶ್ಯವನ್ನು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದರು. ಈ ವೇಳೆ ಹುಲಿ ಕುಣಿತದ ಬಗ್ಗೆ ಸ್ಟಾರ್​ ಕ್ರಿಕೆಟಿಗನಿಗೆ ಸುನೀಲ್​ ಶೆಟ್ಟಿ ಮಾಹಿತಿ ನೀಡಿದರು. ಹರ್ಭಜನ್​ ಸಿಂಗ್​ ಆಗಮಿಸುತ್ತಿದ್ದಂತೆ ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಜನರು ಕರತಾಡನದ ಜೊತೆಗೆ ಮೊಬೈಲ್​ ಲೈಟ್​ ಆನ್​ ಮಾಡಿ ಕ್ರಿಕೆಟಿಗನ ಮೇಲಿರುವ ಪ್ರೀತಿಯನ್ನು ವ್ಯಕ್ತಪಡಿಸಿದರು. ಒಟ್ಟು ಹತ್ತು ತಂಡಗಳ ಪಿಲಿನಲಿಕೆ ಸ್ಪರ್ಧೆಯಲ್ಲಿ ಎರಡು ತಂಡಗಳ ಹುಲಿಕುಣಿತವನ್ನು ಅವರು ವೀಕ್ಷಿಸಿದರು.


Spread the love

About Laxminews 24x7

Check Also

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್​

Spread the loveಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ