ನ.1ರ ಬಳಿಕ ಯಾವ ದಿನವಾದರೂ ಸರಿ, ಬಹಿರಂಗ ಚರ್ಚೆಗೆ ಸಮಯ ಫಿಕ್ಸ್​ ಮಾಡಿ; ಡಿ ಕೆ ಶಿವಕುಮಾರ್

Spread the love

ಬೆಂಗಳೂರು: ಯಾವಾಗಾದ್ರೂ ಸರಿ. ಚರ್ಚೆಗೆ ಸಮಯ ಫಿಕ್ಸ್​ ಮಾಡಿ. ನವೆಂಬರ್​ 1ರ ನಂತರ ಯಾವ ದಿನಾಂಕವಾದ್ರೂ ನಿಗದಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚರ್ಚೆಗೆ ಒಪ್ಪಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ​ಕೂಡ ಬಹಿರಂಗ ಚರ್ಚೆಗೆ ಒಪ್ಪಿಗೆ ಸೂಚಿಸಿ ಸಮಯ ನಿಗದಿಪಡಿಸುವಂತೆ ಹೇಳಿದ್ದಾರೆ.

ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್​​ ಪಟಾಲಮ್​ನಿಂದ ರೈತರ ಪರಿಹಾರದಲ್ಲಿ ಲೂಟಿ ಎಂಬ ಹೆಚ್​​ಡಿಕೆ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು. “ಎನೀ ಟೈಮ್​ ಚರ್ಚೆಗೆ ಟೈಮ್​ ಫಿಕ್ಸ್​ ಮಾಡಿ. ನವೆಂಬರ್​ 1ರ ನಂತರ ದಿನಾಂಕ ನಿಗದಿಪಡಿಸಿ. ನಾನು ಏನು ಮಾಡಿದ್ದೇನೆ, ಅವರೇನು ಮಾಡಿದ್ದಾರೆ ಅನ್ನೋದನ್ನು ಅಲ್ಲೇ ಬಿಚ್ಚಿ ಮಾತಾಡೋಣ. ಗಾಳಿಯಲ್ಲಿ ಗುಂಡು ಹೊಡೆಯೋದು, ಹಿಟ್​ ಆಂಡ್​ ರನ್​ ಮಾಡೋದಲ್ಲ” ಎಂದು ಕಿಡಿಕಾರಿದರು. ಸಮಯ ಫಿಕ್ಸ್​ ಮಾಡಿ. ಅಲ್ಲಿ ಬಂದು ಎಲ್ಲವನ್ನೂ ಮಾತಾಡೋಣ ಎಂದು ಹೇಳಿ ಹೆಚ್​ಡಿಕೆ ಅವರ ಬೇರೆ ಯಾವುದೇ ಆರೋಪಗಳಿಗೆ ಪ್ರತಿಕ್ರಿಯಿಸದೇ ಹೊರಟು ಹೋದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ