Breaking News

ವಡೇರಹಟ್ಟಿಯ ಇಬ್ಬರು ಬಾಲಕರಿಗೆ ಕೆ.ತ್ಯಾಗರಾಜನ್ ಶುಕ್ರವಾರ ಸನ್ಮಾನ

Spread the love

ಬೆಳಗಾವಿ : ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕನನ್ನು ರಕ್ಷಿಸಿದ್ದ ಗೋಕಾಕ ತಾಲ್ಲೂಕಿನ ವಡೇರಹಟ್ಟಿಯ ಇಬ್ಬರು ಬಾಲಕರಿಗೆ ಇಲ್ಲಿನ ಪೊಲೀಸ್ ಆಯುಕ್ತರ ಕಾರ್ಯಾಲಯದಲ್ಲಿ ಕೆ.ತ್ಯಾಗರಾಜನ್ ಶುಕ್ರವಾರ ಸನ್ಮಾನಿಸಿ, ಕೇಂದ್ರ ಗೃಹ ಸಚಿವಾಲಯದಿಂದ ಕೊಡ ಮಾಡಿದ ಜೀವನ ರಕ್ಷಾ ಪದಕ ವಿತರಿಸಿದರು.

ವಡ್ಡೇರಹಟ್ಟಿಯ  ಸಿದ್ದಪ್ಪ ಕೆಂಪಣ್ಣ ಹೊಸಟ್ಟಿ, ಶಿವಾನಂದ ದಶರಥ ಹೊಸಟ್ಟಿ ಬಾಲಕರಿಗೆ  1 ಲಕ್ಷ ಚೆಕ್ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಿದರು.

2018ರ ಮೇ 8ರಂದು ಗೋಕಾಕ ತಾಲ್ಲೂಕಿನ ವಡೇರಹಟ್ಟಿ ಗ್ರಾಮದ ಇಂದ್ರವೇಣಿ ಹಳ್ಳದಲ್ಲಿ ಆಕಸ್ಮಿಕವಾಗಿ ಬಿದ್ದು ಕೊಚ್ಚಿ ಹೋಗುತ್ತಿದ್ದನು. ಈ ವೇಳೆ ಹಳ್ಳದಲ್ಲಿ ಮುಳುಗುತ್ತಿದ್ದ ಬಾಲಕನನ್ನು ಪ್ರಾಣಾಪಾಯದಿಂದ ರಕ್ಷಿಸಿ, ಸಮಯ ಪ್ರಜ್ಞೆ ತೋರಿದ್ದರು. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ