Breaking News

ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ: ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟ​ ಪುನೀತ್​ ರಾಜ್​ಕುಮಾರ್​ ಅಕಾಲಿಕ ಸಾವು ಸಂಭವಿಸಿ ಇಂದಿಗೆ ಎರಡು ವರ್ಷವಾಗುತ್ತಿದೆ.

ಸಿನಿಪ್ರಿಯರಿಗೆ ಮನರಂಜನೆಯ ರಸದೌತಣ ಉಣಬಡಿಸುವ ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದವರು ಅಪ್ಪು. ಹಾಗಾಗಿ ಇಂದಿಗೂ ಅಭಿಮಾನಿಗಳ ಮನದಲ್ಲಿ ಅವರು ಅಚ್ಚಳಿಯದ ನೆನಪಾಗಿದ್ದಾರೆ.

ಪುಣ್ಯಸ್ಮರಣೆ ವಿಧಿವಿಧಾನಕ್ಕೆ ಸಿದ್ಧತೆ: ಅಪ್ಪುಪುಣ್ಯಸ್ಮರಣೆಗೆ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಬಳಿ ಶನಿವಾರವೇ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ರಾಜ್​ ಕುಟುಂಬಸ್ಥರು ಈ ಸಮಾಧಿ‌ ನಿರ್ಮಿಸಿದ್ದಾರೆ. ಪುನೀತ್ ರಾಜ್​ಕುಮಾರ್​ ಸಮಾಧಿಯನ್ನು ಬಿಳಿ ಮಾರ್ಬಲ್‌​​​​ನಲ್ಲಿ ನಿರ್ಮಿಸಲಾಗಿದೆ. ಇದರ ಮೇಲೆ ಪುನೀತ್ ಫೋಟೋ ಇಡಲಾಗಿದೆ. ಸಮಾಧಿ ಸುತ್ತಲ ಪ್ರದೇಶಕ್ಕೆ ಬಿಳಿ ಬಣ್ಣದ ಕಲ್ಲಿನ ಚಪ್ಪಡಿ ಹೊದಿಸಲಾಗಿದೆ. ಅಣ್ಣಾವ್ರ ಸ್ಮಾರಕದಂತೆಯೇ ಪುತ್ರನ ಸ್ಮಾರಕವನ್ನೂ ರಚಿಸಲಾಗಿದೆ.

ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾಗೂ ಮಕ್ಕಳು ಸಮಾಧಿ ಬಳಿ ಆಗಮಿಸಿ ಪೂಜೆ ಸಲ್ಲಿಸಲಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್, ಶಿವ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

ಸರತಿ ಸಾಲಿನಲ್ಲಿ ನಿಂತ ಅಭಿಮಾನಿಗಳು: ಡಾ.ರಾಜ್‌ಕುಮಾರ್, ಪಾರ್ವತಮ್ಮ ಹಾಗು ಪುನೀತ್ ರಾಜ್‌ಕುಮಾರ್ ಸಮಾಧಿಗಳನ್ನು ವಿವಿಧ ಹೂಗಳಿಂದ ಶೃಂಗರಿಸಲಾಗಿದೆ. ಪ್ರಾರ್ಥನೆ ಸಲ್ಲಿಸಲು ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾಧಿಯತ್ತ ಆಗಮಿಸುತ್ತಿದ್ದಾರೆ. ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದ ದೃಶ್ಯ ಕಂಡುಬಂತು.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ