Breaking News

ಬೆಂಗಳೂರು: ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ, ಒಂಬತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ

Spread the love

ಬೆಂಗಳೂರು : ಗ್ಯಾರೇಜ್‌ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಒಂಬತ್ತಕ್ಕೂ ಅಧಿಕ ಬಸ್‌ಗಳು ಆಹುತಿಯಾದ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ.

ಎಸ್​ವಿ ಕೋಚ್ ಎನ್ನುವ ಹೆಸರಿನ ಗ್ಯಾರೇಜ್‌ನಲ್ಲಿ ಹೊಸ ಹಾಗೂ ಹಳೆಯ ಬಸ್ ಇಂಜಿನ್‌ಗಳಿಗೆ ಬಾಡಿ ಅಳವಡಿಸುವ ಕೆಲಸ ಮಾಡಲಾಗುತ್ತಿತ್ತು. ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ ಗ್ಯಾರೇಜ್​ನಲ್ಲಿ ನಿಂತಿರುವ ಬಸ್‌ಗಳಿಗೆ ಆವರಿಸಿದೆ ಎನ್ನಲಾಗ್ತಿದೆ.

ನೋಡ ನೋಡುತ್ತಿದ್ದಂತೆ ಐದಕ್ಕೂ ಅಧಿಕ ಬಸ್‌ಗಳು ಅಗ್ನಿಗಾಹುತಿಯಾಗಿದ್ದು, ಮತ್ತಷ್ಟು ವ್ಯಾಪಿಸುವ ಸಾಧ್ಯತೆಯಿದೆ. ಸದ್ಯ ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳೊಂದಿಗೆ ದೌಡಾಯಿಸಿರುವ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಕೋರಮಂಗಲದಲ್ಲಿ ಅಗ್ನಿ ಅವಘಡ:ಇತ್ತಿಚೇಗೆ ಕೋರಮಂಗಲದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿಗೆ ರೆಸ್ಟೋರೆಂಟ್ ಆಹುತಿಯಾಗಿರುವ ಘಟನೆ ಅಕ್ಟೋಬರ್​ 18ರ ಬುಧವಾರ ಬೆಳಗ್ಗೆ ಸಂಭವಿಸಿತ್ತು. ಕೋರಮಂಗಲ ಸಮೀಪದ ಮಡ್ ಪೈಪ್ ರೆಸ್ಟೋರೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಂತಸ್ತು ಸಂಪೂರ್ಣ ಬೆಂಕಿಗಾಹುತಿಯಾಗಿತ್ತು. ಅಗ್ನಿ ಅವಘಡದಿಂದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು. ಅಡುಗೆ ಅನಿಲ‌ ಸೋರಿಕೆಯೇ ಅವಘಡಕ್ಕೆ ಕಾರಣ ಎನ್ನಲಾಗಿತ್ತು. ಈ ವೇಳೆ ಯುವಕನೊಬ್ಬ ತನ್ನ ಪ್ರಾಣ ಉಳಿಸಿಕೊಳ್ಳಲು ಐದು ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದಿದ್ದ


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ