Breaking News

ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡನನ್ನು ಹೆಂಡತಿಯೇ ಕೊಲೆ

Spread the love

ಬೆಳಗಾವಿ: ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡನನ್ನು ಹೆಂಡತಿಯೇ ಕೊಲೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಪತಿಗೆ ನಿದ್ರೆ ಮಾತ್ರೆ ನೀಡಿ, ನಿದ್ದೆ ಹತ್ತಿದ ಬಳಿಕ ಕುತ್ತಿಗೆಗೆ ಹಗ್ಗದಿಂದ‌ ಬಿಗಿದು ಪತ್ನಿ ಮಹಾದೇವಿ ಕರ್ಕಿ ಕೊಲೆ ಮಾಡಿದ್ದಾಳೆ.

ಬಾಬು ಕಲ್ಲಪ್ಪ ಕರ್ಕಿ (48) ಕೊಲೆಯಾದ ದುರ್ದೈವಿ.

ನಿನ್ನೆ ಬೆಳಗ್ಗೆಯ ಸಮಯ ಆರೋಪಿ ಪತ್ನಿ ಮಹಾದೇವಿ ಕರ್ಕಿ, ‘ಆಕಸ್ಮಿಕವಾಗಿ ಪತಿ ಮೃತ’ರಾಗಿದ್ದಾರೆಂದು ಅಕ್ಕಪಕ್ಕದ ಮನೆಯವರನ್ನು ನಂಬಿಸಲು ಪ್ರಯತ್ನಿಸಿದ್ದಾಳೆ. ಈ ವೇಳೆ, ಮೃತ ಬಾಬು ಕುತ್ತಿಗೆಗೆ ಗಾಯವಾಗಿದ್ದು ಗಮನಿಸಿದ ಗ್ರಾಮಸ್ಥರು ಸಂಶಯ ವ್ಯಕ್ತಪಡಿಸಿದ್ದರು. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ನಂದಗಡ ಪೊಲೀಸರು ಮತ್ತು ಗ್ರಾಮಸ್ಥರ ಮುಂದೆ ಆರೋಪಿ ಮಹಾದೇವಿ ತನ್ನ ಗಂಡ ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಕಿರುಕುಳ‌ ತಾಳಲಾರದೇ ಈ ರೀತಿ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಇನ್ನು ನಿನ್ನೆ ತಡರಾತ್ರಿ ಆರೋಪಿಯನ್ನು ಬಂಧಿಸಿದ ನಂದಗಡ ಪೊಲೀಸರು, ಖಾನಾಪುರ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಸದ್ಯ ಪ್ರಕರಣ ನಂದಗಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ