Home / ಜಿಲ್ಲೆ / ರಾಯಚೂರು / ಬಸನಗೌಡ ತುರವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆ- ರಂಗೇರಿದ ಮಸ್ಕಿ ಉಪಚುನಾವಣಾ ಕಣ

ಬಸನಗೌಡ ತುರವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆ- ರಂಗೇರಿದ ಮಸ್ಕಿ ಉಪಚುನಾವಣಾ ಕಣ

Spread the love

ರಾಯಚೂರು: ಮಸ್ಕಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಅಘೋಷಿತ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಕ್ಷಾಂತರದಿಂದ ತೆರವಾಗಿರುವ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ರಾಜಕೀಯ ಚುರುಕುಗೊಂಡಿದೆ. ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಪೈಪೋಟಿಯ ವಾತಾವರಣ ನಿರ್ಮಾಣವಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಕೇವಲ 213 ಮತಗಳ ಅಂತರದಿಂದ ಪರಾಭವಗೊಂಡಿದ್ದ ಬಸನಗೌಡ ತುರವಿಹಾಳ ಈಗ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಪ್ರತಾಪ್ ಗೌಡ ವಿರುದ್ಧ ಅಕ್ರಮ ಮತದಾನದ ಪ್ರಕರಣ ದಾಖಲಿಸಿದ್ದ ಬಸನಗೌಡರನ್ನು ಬಿಜೆಪಿ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣವನ್ನು ವಜಾಗೊಳಿಸಿದೆ. ಹೀಗಾಗಿ ಚುನಾವಣಾ ಕಣ ರಂಗೇರಿದೆ.


Spread the love

About Laxminews 24x7

Check Also

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

Spread the love ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ