Breaking News

ರಾಜ್ಯೋತ್ಸವದಂದು ಕರಾಳ ದಿನಾಚರಣೆ ಮೆರವಣಿಗೆ, ಆಕ್ಷೇಪಾರ್ಹ ಘೋಷಣೆ; ಎಂಇಎಸ್​ನ 18 ಜನರ ವಿರುದ್ಧ ಪ್ರಕರಣ ದಾಖಲು

Spread the love

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಿಸಿ, ನಾಡದ್ರೋಹಿ ಘೋಷಣೆಗಳನ್ನು ಕೂಗಿದ ಮಹಾರಾಷ್ಟ್ರ ಏಕೀಕಕರಣ ಸಮಿತಿಯ (ಎಂಇಎಸ್) 18 ಸದಸ್ಯರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಡಳಿತದಿಂದ ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿ ಇಲ್ಲದೇ ಇದ್ದರೂ ಕೂಡ ನಗರದಲ್ಲಿ ಕರಾಳ ದಿನ ಹೆಸರಲ್ಲಿ ಮೆರವಣಿಗೆ ಮಾಡಿ ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದರು.

ಎಂಇಎಸ್ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸರು, ಎಂಇಎಸ್‌ನ ಮಾಳೋಜಿರಾವ್ ಅಷ್ಟೇಕರ್, ಮಾಜಿ ಶಾಸಕ ಮನೋಹರ ಕಿಣೇಕರ್, ರಂಜಿತ್ ಚವ್ಹಾಣಪಾಟೀಲ, ಸರಿತಾ ಪಾಟೀಲ, ಸಾರಿಕಾ ಪಾಟೀಲ, ಅಮರ ಯಳ್ಳೂರಕರ್, ಪ್ರಕಾಶ ಮರಗಾಳೆ ರವಿ ಸಾಳುಂಕೆ, ಅಂಕುಶ ಕೇಸರಕರ್ ಸೇರಿದಂತೆ 18 ಜನರ ವಿರುದ್ಧ ಕೇಸ್ ದಾಖಲಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ