Breaking News

“ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ..:C.M.

Spread the love

ಗದಗ: ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನೊಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ ನಡೆದ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ, ಡಿಸಿಎಂ ಡಿಕೆ ಶಿವಕುಮಾರ್​ ಸಹ ಇದ್ದರು.

ತುಮಕೂರಿನಲ್ಲಿ ಸಚಿವ ಕೆ ಎನ್​ ರಾಜಣ್ಣ ಅವರು, ಜಿ ಪರಮೇಶ್ವರ್​​ಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಹೊರತುಪಡಿಸಿದರೆ ಪರಮೇಶ್ವರ್​ ಸಿಎಂ ಆಗಬೇಕು ಎಂದು ನಾವು ಬಯಸುತ್ತೇವೆ ಎಂಬ ಹೇಳಿಕೆಯನ್ನು ಮಾಧ್ಯಮದವರು ಸಿಎಂ ಸಿದ್ದರಾಮಯ್ಯ ಬಳಿ ಕೇಳಿದಾಗ, “ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನು ಒಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ” ಎಂದು ಮಾಧ್ಯಮದವರ ಮೇಲೆ ಸಿಟ್ಟಾದರು.

ಮುಂದುವರೆದು, ಮುಖ್ಯಮಂತ್ರಿ ವಿಚಾರದಲ್ಲಿ ನಾನು ನಿನ್ನೆ ಹೈಕಮಾಂಡ್​ ಏನು ಹೇಳುತ್ತದೆ ಅದಕ್ಕೆ ಬದ್ಧರಾಗಿರುತ್ತೇವೆ ಎಂದಿದ್ದೆ. ಅಷ್ಟೇ ಅಲ್ಲ ಇದು ಹೈಕಮಾಂಡ್​ ಇರುವ ಪಕ್ಷ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ

Spread the love ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ