Breaking News
Home / ರಾಜ್ಯ / ಸ್ಥಳ ಮಹಜರು ವೇಳೆ ಮಚ್ಚಿನಿಂದ್ಲೇ ಪೊಲೀಸರ ಮೇಲೆ ದಾಳಿಗೆ ಯತ್ನ!

ಸ್ಥಳ ಮಹಜರು ವೇಳೆ ಮಚ್ಚಿನಿಂದ್ಲೇ ಪೊಲೀಸರ ಮೇಲೆ ದಾಳಿಗೆ ಯತ್ನ!

Spread the love

ತುಮಕೂರು: ನಗರದಲ್ಲಿ ಪೊಲೀಸರ ಬಂದೂಕು ಸದ್ದು ಮಾಡಿದೆ. ರೌಡಿಶೀಟರ್ ರೋಹಿತ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ತುಮಕೂರು ತಾಲೂಕಿನ ಮಾರನಾಯಕಪಾಳ್ಯ ಬಳಿ ಶೂಟೌಟ್ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ ಮುನಿರಾಜು ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಡಕಾಯಿತಿ ಪ್ರಕರಣದಲ್ಲಿ ಆರೋಪಿ ರೋಹಿತ್‍ನನ್ನ ಪೊಲೀಸರು ಬಂಧಿಸಿದ್ದಾರೆ.

ಡಕಾಯಿತಿಗೆ ಬಳಸಿದ್ದ ಮಚ್ಚು ಬಚ್ಚಿಟ್ಟಿದ್ದ ಜಾಗಕ್ಕೆ ಪೊಲೀಸರನ್ನ ರೋಹಿತ್ ಕರೆದೊಯ್ದಿದ್ದಾನೆ. ಇದೇ ವೇಳೆ ಮಚ್ಚು ತೋರಿಸಿ ಅದೇ ಮಚ್ಚಿನಿಂದ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಯತ್ನಿಸಿದ್ದಾನೆ. ಹೆಡ್ ಕಾನ್ಸ್ ಟೇಬಲ್ ಹನುಮರಂಗಯ್ಯ ಮೇಲೆ ರೋಹಿತ್ ಮಚ್ಚು ಬೀಸಿದ್ದಾನೆ. ರೋಹಿತ್ ದಾಳಿಗೆ ಪ್ರತಿಯಾಗಿ ಸಿಪಿಐ ಮುನಿರಾಜು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಾಳಿಯಲ್ಲಿ ಹಾರಿಸಿದ ಗುಂಡಿಗೆ ಶರಣಾಗದ ರೋಹಿತನ ಎಡಗಾಲಿಗೆ ಶೂಟ್ ಮಾಡಿದ್ದಾರೆ.

ಗಾಯಾಳು ರೋಹಿತ್ ನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಎಡಭುಜಕ್ಕೆ ಮಚ್ಚಿನೇಟು ತಿಂದ ಹನುಮರಂಗಯ್ಯ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಶೂಟೌಟ್ ನಡೆದಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ