Breaking News

ಹಿರಿಯ ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಪ್ರಕರಣ: ಮಾಜಿ ಕಾರು ಚಾಲಕನ ಬಂಧನ

Spread the love

ಬೆಂಗಳೂರು: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್. (45) ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಾಪುರ್ ಅವರು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ಆರೋಪಿ ಕಿರಣ್ ಕಳೆದ ಎಂಟು ವರ್ಷಗಳಿಂದ ಗಣಿ ಇಲಾಖೆ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇರೆಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ‌ನಾಲ್ಕು ವರ್ಷಗಳಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ. ವಿವಿಧ ಕಾರಣಕ್ಕಾಗಿ ಎರಡು ತಿಂಗಳ‌ ಹಿಂದೆ ಕೆಲಸದಿಂದ ತೆಗೆದುಹಾಕಲಾಗಿತ್ತು. ಕೊಲೆಗೂ ಮುನ್ನ ನ. 3 ರಂದು ಪ್ರತಿಮಾ ಭೇಟಿ ಮಾಡಲು ಕಿರಣ್ ಬಂದಿದ್ದ, ಆದರೆ ಪ್ರತಿಮಾ ಸಿಕ್ಕಿರಲಿಲ್ಲ. ನ.4 ರಂದು ರಾತ್ರಿ ಮತ್ತೆ ಬಂದು ಕೆಲಸಕ್ಕೆ ಮರಳಿ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದ. ಮನವಿಗೆ ಸ್ಪಂದಿಸದ ಹಿನ್ನೆಲೆ ಪ್ರತಿಮಾ ಕೊಲೆ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಭಾನುವಾರ ಪ್ರತಿಮಾ ಸಹೋದರ ಪ್ರತೀಶ್ ಎಂಬುವರು ಪೊಲೀಸರಿಗೆ ಕರೆ ಮಾಡಿ ನೀಡಿದ ಮಾಹಿತಿ ಪ್ರಕಾರ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದಾಗ ಹತ್ಯೆ ಬೆಳಕಿಗೆ ಬಂದಿತ್ತು. ಆರೋಪಿ ಪತ್ತೆಗೆ ಮೂರು ವಿಶೇಷ ಪೊಲೀಸ್​ ತಂಡ ರಚನೆ ಮಾಡಲಾಗಿತ್ತು. ಪ್ರತಿಮಾ‌ ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ವಿಚಾರಣೆ ನಡೆಸಲಾಗಿತ್ತು. ಪ್ರತಿಮಾ ಸಂಪರ್ಕದಲ್ಲಿದ್ದವರನ್ನೂ ಸಹ ವಿಚಾರಣೆ ಮಾಡಲಾಗಿತ್ತು. ಈ ವೇಳೆ ಮಾಜಿ ಚಾಲಕ ಕಿರಣ್, ಪ್ರತಿಮಾರನ್ನು ಸಂಪರ್ಕಿಸಿರುವುದು ತಿಳಿದುಬಂದಿದ್ದು, ಬಳಿಕ ತನಿಖೆ ಕೈಗೊಂಡಾಗ ಆರೋಪಿ ಮಲೆಮಹದೇಶ್ವರ ಬೆಟ್ಟದ ಬಳಿ ಅವಿತುಕೊಂಡಿರುವುದು ಗೊತ್ತಾಗಿತ್ತು. ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ತಿಳಿಸಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ